Monday, February 2, 2026
Monday, February 2, 2026

Kanaka Dasa Jayanti 2024 ಕನಕದಾಸರ ಕೀರ್ತನೆಗಳು ಇಂದಿಗೂ ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ ಪ್ರಮುಖವಾಗಿವೆ- ಎಸ್.ಸಿ.ರಾಮಚಂದ್ರ

Date:

Kanaka Dasa Jayanti 2024 “ಕನಕದಾಸರ ತತ್ವ ಆದರ್ಶ ಗುಣಗಳು ಹಾಗೂ ಕೀರ್ತನೆಗಳು ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ… ಎಸ್ ಸಿ ರಾಮಚಂದ್ರ. ಕಾರ್ಯದರ್ಶಿಗಳು ರೋಟರಿ ಎಜುಕೇಶನಲ್ ಚಾರ್ರಿಟೇಬಲ್ ಟ್ರಸ್ಟ್..”

ಸಂತ ಸಮಾಜವಾದಿ ಶ್ರೇಷ್ಠ ಚಿಂತಕ.ದಾರ್ಶಣಿಕ ರಾದ ಕನಕದಾಸರ ಕೀರ್ತನೆಗಳು ತತ್ವ ಆದರ್ಶ ಗುಣಗಳು ಇಂದಿಗೂ ಸಹ ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ.ಎಸ್ಎಸ್ಸಿ ರಾಮಚಂದ್ರ.ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ 515 ನೇ ಕನಕದಾಸ ಜಯಂತಿಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಇದೇ ಸಂದರ್ಭದಲ್ಲಿ ಟ್ರಸ್ಟಿನ ಉಪಾಧ್ಯಕ್ಷರಾದ ಡಾ. ಪರಮೇಶ್ವರ್ ಶಿಗ್ಗಾoವ್ ಅವರು ಮಾತನಾಡುತ್ತ ಈ ನಾಡು ಕಂಡ ಅತ್ಯಂತ ಶ್ರೇಷ್ಠ ಸಂತ ಕನಕದಾಸರು ಎಲ್ಲರಿಗೂ ಸಮಾನತೆಯ ಬಗ್ಗೆ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಬಗ್ಗೆ ಸಂದೇಶವನ್ನು ನೀಡಿದ ಕನಕದಾಸರು ಎಲ್ಲಾ ವರ್ಗದ ಜನರಿಗೆ ಮೆಚ್ಚುಗೆಗೆ ಪಾತ್ರನಾಗಿದ್ದರು ಎಂದು ನುಡಿದರು ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ Kanaka Dasa Jayanti 2024 ವಿಜಯಕುಮಾರ್ ಅವರು ಮಾತನಾಡುತ್ತಾ ಕನಕದಾಸರು ಶತಮಾನಗಳ ಹಿಂದೆಯೇ ಸಮಾಜದಲ್ಲಿ ಬೇರೂರಿದ ಅಸ್ಪೃಶ್ಯತೆ ಹಾಗೂ ಜಾತಿ ವಾದವನ್ನು ನಿರ್ಮೂಲನೆ ಮಾಡಲು ಯಾವುದೇ ಪಲಾಪೇಕ್ಷೆ ಇಲ್ಲದೆ ಸಂದೇಶವನ್ನು ಸಾರಿದ ಮಹಾನ್ ಶ್ರೇಷ್ಠ ದಾರ್ಶನಿಕರಾಗಿದ್ದರು. ಈ ನಿಟ್ಟಿನಲ್ಲಿ ನಮ್ಮ ಯುವ ಪೀಳಿಗೆಗೆ ಕನಕದಾಸರ ಸಾಧನೆ ಚಿಂತನೆ ತಿಳಿಸುವ ಅಗತ್ಯತೆ ತುಂಬಾ ಇದೆ ಅವರ ಕುಲ ಕುಲ ಕುಲ ವೆಂದು ಹೊಡೆದಾಡದಿರಿ ಎಂಬ ಗೀತೆ ಎಂದಿಗೂ ಸಹ ಅಜರಾಮರವಾಗಿ ಉಳಿದಿದೆ. ಇದೇ ಸಂದರ್ಭದಲ್ಲಿ ಸಹ ಶಿಕ್ಷಕಿ ಕಾವ್ಯ ಅವರು ಮಾತನಾಡಿ ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿದ್ದು ನಮ್ಮೊಳಗಿನ ನಾನು ಎಂಬ ಅಹಂ ಹೋದರೆ ಎಂಥಹ ಸಾಧನೆಯು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಆರ್ ಸೂರ್ಯನಾರಾಯಣ್. ಶಿಕ್ಷಕರಾದ ಸುಷ್ಮಾ ಶ್ವೇತಾ ಹರ್ಷಿತಾ. ರೂಪ ರಾವ್.ಸುಜಾತಾ. ಸುಪ್ರೀತಾ ಮೋಹನ್. ವಿದ್ಯಾ. ರುಕ್ಕಯ್ಯ. ಪ್ರತಿಮಾ. ರೇಖಾˌ ಪ್ರದೀಪ್ˌ ಅನೀಶ್ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...