Sunday, December 14, 2025
Sunday, December 14, 2025

CM Siddharamaiah ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ & ಜಾಗತಿಕ ಸಹಯೋಗಕ್ಕಾಗಿ ಟೆಕ್ ಸಮ್ಮೀಟ್ ವಿಶಿಷ್ಟ ವೇದಿಕೆ- ಸಿದ್ಧರಾಮಯ್ಯ

Date:

CM Siddharamaiah ಬೆಂಗಳೂರು ಟೆಕ್ ಸಮ್ಮಿಟ್ – 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ.

ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ.

ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಟೆಕ್ ಸಮೀಟ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

20ನೇ ಶತಮಾನದ ಆರಂಭದಲ್ಲಿ, ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.

2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು.

CM Siddharamaiah ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.

ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ.

ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...