Sunday, August 2, 2026
Sunday, August 2, 2026

Department of Kannada and Culture ಶಿವಮೊಗ್ಗ ಜಿಲ್ಲೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ- ಉಮೇಶ್ ಹಾಲಾಡಿ

Date:

Department of Kannada and Culture ಸಾಂಸ್ಕೃತಿಕ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮುಂಚೂಣಿಯಲ್ಲಿದ್ದು, ಮೈಸೂರು ನಂತರ ಶಿವಮೊಗ್ಗದಲ್ಲಿ ಹೆಚ್ಚು ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.
ಭಾವಗಾನ 8ನೇ ವಾರ್ಷಿಕೋತ್ಸವದಲ್ಲಿ ದಂಪತಿಗಳ ಗಾಯನ ಸ್ಪರ್ಧೆ, ನಾರಾಯಣ ಗುರುಗಳ ಗೀತೆಗಳ ಸ್ಪರ್ಧೆ ಹಾಗೂ ವಿವಿಧ ಬಗೆಯ ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ನಿರಂತರ ಪರಿಶ್ರಮ ಸಾಧನೆ ಹಾಗೂ ಗುರುಗಳ ಮಾರ್ಗದರ್ಶನ ಅವಶ್ಯಕ ಎಂದು ತಿಳಿಸಿದರು.
ಮಥುರಾ ಪ್ಯಾರಾಡೈಸ್ ಹೋಟೆಲ್ ಕಲಾಪೋಷಕರಿಗೆ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದರ ಮೂಲಕ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಸಹಕಾರ ನೀಡುತ್ತ ಬಂದಿದ್ದಾರೆ ಎಂದರು.
Department of Kannada and Culture ದಂಪತಿಗಳ ಸ್ಪರ್ಧೆಯಲ್ಲಿ ಪ್ರಿಯಾಂಕ ಭರತ್ ಪ್ರಥಮ ಬಹುಮಾನ, ಸುಮಾ ಚಂದ್ರಶೇಖರ ಭಟ್ ದ್ವಿತೀಯ ಹಾಗೂ ಛಾಯಾ ನವೀನ್ ತೃತೀಯ ಬಹುಮಾನ ಪಡೆದರು. ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.
ತೀರ್ಪುಗಾರರಾಗಿ ಶಾಂತಾ ಶೆಟ್ಟಿ, ಉಮಾ ದಿಲೀಪ್, ಮಂಜುಳಾ ಡಿ.ಸಾಗರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗಾಯಕ ಜಿ.ವಿಜಯಕುಮಾರ್ ಅವರು 57ವರ್ಷದಿಂದ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ ಭದ್ರಾವತಿ ವಾಸು ಅವರಿಗೆ ಸನ್ಮಾನಿಸಿದರು. ನಂತರ ಮಾತನಾಡಿ, ಸಂಗೀತ ನಮ್ಮಲ್ಲಿನ ಖಿನ್ನತೆ ದೂರಗೊಳಿಸುತ್ತದೆ ಎಂದು ತಿಳಿಸಿದರು.
ನೂರು ಜನರು ಗಾಯಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಡೀ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗಿರೀಶ್ ಬ್ಯಾಡ, ವಿಜಯಾ ಸತೀಶ್, ಬುಜಂಗಪ್ಪ, ಪ್ರಮೋದ್, ಪ್ರಶಾಂತ್, ಹೇಮಂತ್, ಚಂದ್ರಶೇಖರ್ ಭಟ್, ಬಿಂದು ವಿಜಯಕುಮಾರ್, ಸುಮಾ, ಶಶಿರೇಖಾ, ಆದ್ಯಾ, ರವಿ, ಬಸವರಾಜ್, ರವಿ ಚವ್ಹಾಣ್ ಹಾಗೂ ಕಲಾವಿದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...