Sunday, December 14, 2025
Sunday, December 14, 2025

DVS College of Arts and Science  ಕನಸುಗಳ ಸಾಕಾರಕ್ಕೆ ಶಿಕ್ಷಣ ಪಡೆಯುವ ಹಂತದಿಂದಲೇ ಪ್ರಯತ್ನಿಸಬೇಕು- ಎಸ್.ಪಿ.ದಿನೇಶ್

Date:

DVS College of Arts and Science  ಶಿಕ್ಷಣದಲ್ಲಿ ಪ್ರಗತಿ ಸಾಧಿಸುವುದು ಉತ್ತಮ ಜೀವನ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಅಭಿಪ್ರಾಯಪಟ್ಟರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾ ಕಾಲೇಜಿನ ಹಂತದಲ್ಲಿಯೇ ನೀವು ಅಧ್ಯಯನ ಮಾಡುವ ಆಸಕ್ತಿ ವಿಷಯಗಳ ಬಗ್ಗೆ ಅರಿತುಕೊಳ್ಳಬೇಕು. ನಿಮ್ಮ ಇಷ್ಟದ ವಿಷಯದಲ್ಲಿ ಉನ್ನತ ಪದವಿ ಪಡೆಯಬೇಕು. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು ಶಿಕ್ಷಣ ಪಡೆಯುವ ವೇಳೆಯಿಂದಲೇ ಹಂತ ಹಂತವಾಗಿ ಪ್ರಯತ್ನ ಆರಂಭಿಸಬೇಕು ಎಂದು ತಿಳಿಸಿದರು.

DVS College of Arts and Science ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆ.ಭಾಸ್ಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾಭ್ಯಾಸ, ಓದು ತುಂಬಾ ಮುಖ್ಯ. ಎಲ್ಲರೂ ತಮ್ಮ ಗುರಿಯನ್ನು ಸಾಧಿಸುವಲ್ಲಿ ಮುನ್ನುಗ್ಗುವ ಅಭಿಲಾಷೆ ಹೊಂದಬೇಕು. ಗುರು ಹಿರಿಯರ ಮಾರ್ಗದರ್ಶನ ಪಡೆದು ಯಶಸ್ಸಿನತ್ತ ಮುನ್ನಡೆಯಬೇಕು. ನಿಮ್ಮ ಗುರಿ ಸಾಧಿಸುವ ಜತೆಯಲ್ಲಿ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು. ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿ.ಇ.ರುದ್ರೇಶ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...