Monday, September 21, 2026
Monday, September 21, 2026

ಜಿಲ್ಲೆಯಲ್ಲಿನ ಕೆಲವು ಪಂಚಾಯತ್ ಗಳಿಗೆ ಉಪ ಚುನಾವಣೆ‌ ಪ್ರಯುಕ್ತ ಆಯಾ ಸ್ಥಳಗಳ ಶಾಲೆಗಳಿಗೆ ರಜೆ ಘೋಷಣೆ

Date:

ನ.23 ರಂದು ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, ಚುನಾವಣಾ ಕ್ಷೇತ್ರಗಳಲ್ಲಿನ ಮತದಾನ ಕೇಂದ್ರಗಳು ಬಹುತೇಕ ಶಾಲೆಗಳಾಗಿವೆ. ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವುದರಿಂದ ಜನದಟ್ಟಣೆಯಾಗಿ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತದಾನ ಕೇಂದ್ರವಿರುವ ಶಾಲೆಗಳಿಗೆ ನ. 23 ರ ಶನಿವಾರದಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸ.ಕಿ.ಪ್ರಾ.ಶಾಲೆ ಮತ್ತು ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ. ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ). ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ. ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ.ಶಾಲೆ, ಶಿಕಾರಿಪುರದ ಸ.ಉರ್ದು ಹಿ.ಪ್ರಾ.ಶಾಲೆ ಖಾಜಿ ಮೊಹಲ್ಲ ಹಾಗೂ ಶಿರಾಳಕೊಪ್ಪದ ಸ.ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ. ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆ ಕೊ.ಸಂ.1 ಈ ಶಾಲೆಗಳಲ್ಲಿ ನ.23 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...