Thursday, May 14, 2026
Thursday, May 14, 2026

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

Date:

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...