Wednesday, April 23, 2025
Wednesday, April 23, 2025

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

Date:

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....