Monday, February 2, 2026
Monday, February 2, 2026

Rotary Club Shimoga ಕನಕದಾಸರ ಕೀರ್ತನೆ,ಬೋಧನೆಗಳನ್ನ ನಾವು ಅರಿತು ಬಾಳಬೇಕು- ಜಿ.ಕಿರಣ್ ಕುಮಾರ್

Date:

Rotary Club Shimoga ಕನಕದಾಸರು ಕೀರ್ತನೆಗಳನ್ನು ರಚನೆ ಮಾಡಿ, ಅಂದಿನ ಕಾಲಘಟ್ಟದಲ್ಲಿ ಜಾತಿ ಪದ್ಧತಿ ವಿರುದ್ಧ ಕೀರ್ತನೆಗಳಿಂದ ಸಮಾಜಕ್ಕೆ ಅರಿವು ಮೂಡಿಸಿದರು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಆಯೋಜಿಸಿದ್ದ 537ನೇ ಶ್ರೀ ಕನಕದಾಸ ಜಯಂತಿ ಆಚರಣೆಯಲ್ಲಿ ಮಾತನಾಡಿ, ಸಾಹಿತ್ಯ ಲೋಕಕ್ಕೆ ಇವರ ಕೊಡುಗೆ ಅಪಾರ. ಇವರ ಕೀರ್ತನೆಗಳು, ಬೋಧನೆಗಳು ಇಂದಿಗೂ ಪ್ರಸ್ತುತ ಪ್ರತಿಯೊಬ್ಬರು ಇದನ್ನು ಅರಿತು ಬಾಳಬೇಕು ಎಂದು ತಿಳಿಸಿದರು.

ಕನಕದಾಸರು ಬಾಲ್ಯದಿಂದಲೇ ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತರಾಗಿದ್ದರು. ಕನಕದಾಸ ಜಯಂತಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಲ್ಲಿ ಆಚರಣೆ ಮಾಡುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.

Rotary Club Shimoga ರೋಟರಿ ಪಿಡಿಜಿ ಜಿ.ಎನ್.ಪ್ರಕಾಶ್ ಮಾತನಾಡಿ, ಕನಕದಾಸರು ಅಜರಾಮರ, ದಾಸರು ಕಾಗಿನೆಲೆ ಆದಿಕೇಶವನ ಆರಾಧಕರಾಗಿದ್ದರು ಎಂದು ತಿಳಿಸಿದರು. ಶ್ರೀ ಕನಕದಾಸರ ಕೀರ್ತನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ವಿರೂಪಾಕ್ಷ ಮತ್ತು ಗುರುರಾಜ್ ಅವರು ದಾಸರ ಕೀರ್ತನೆ ಹಾಡಿದರು.

ರೋಟರಿ ರಮೇಶ್ ಮಾತನಾಡಿ, ಕನಕದಾಸರು ವ್ಯಾಸರಾಯರ ಅಚ್ಚುಮೆಚ್ಚಿನ ಶಿಷ್ಯರಾಗಿದ್ದರು ಎಂದರು. ಸಭೆಯಲ್ಲಿ ಸಂತೋಷ್, ಆನಂದ್, ಅರುಣ್ ಕುಮಾರ್, ಚಂದ್ರು ಜೆಪಿ, ಧರ್ಮೇಂದ್ರ ಸಿಂಗ್, ದೀಪ, ಜಯಶೀಲಶೆಟ್ಟಿ, ರಾಜಶ್ರೀ ಬಸವರಾಜ್, ಜ್ಯೋತಿ ಶ್ರೀರಾಮ್, ಹಾಗೂ ಗೀತಾ ಜಗದೀಶ್, ಶುಭಾ ಚಿದಾನಂದ, ಧನಂಜಯ್, ಬಲರಾಮ್, ನಟರಾಜ್, ರೋಟರಿ ಶಿವಮೊಗ್ಗ ಸೆಂಟ್ರಲ್ ಹಾಗೂ ಎಲ್ಲ ಕ್ಲಬ್ಬಿನ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...