Saturday, December 6, 2025
Saturday, December 6, 2025

Karnataka Sanga Shivamogga ನವೆಂಬರ್ 22 & 23 .ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ವಿಶೇಷ ಕಾರ್ಯಕ್ರಮಗಳು

Date:

Karnataka Sanga Shivamogga ನವೆಂಬರ್ 22 ಶುಕ್ರವಾರ ಸಂಜೆ 5 :30ಕ್ಕೆ ಕರ್ನಾಟಕ ಸಂಘದ ಭವನದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆಯನ್ನು ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ ಹೆಗಡೆಯವರು ಶಿವಮೊಗ್ಗ ಟೈಮ್ಸ್ ಸಂಪಾದಕರಾದ ಶ್ರೀ ಎಸ್. ಚಂದ್ರಕಾಂತ್ ಇವರ ಹಳೆಯ ಅಂಚೆ ಚೀಟಿ ಮತ್ತು ನಾಣ್ಯಗಳು ಮತ್ತು ಡಾ. ಶ್ರೀಕಾಂತ್ ಎನ್. ಹೆಗಡೆ ಇವರ ವನ್ಯಜೀವಿ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ಹಾಗೂ ನಾಡದೇವಿ ಭುವನೇಶ್ವರಿ ಚಿತ್ರ ಅನಾವರಣ ಮಾಡಲಿದ್ದಾರೆ.

ಸಾಹಿತಿಗಳಾದ ಡಾ. ಬಿ. ಜನಾರ್ಧನ ಭಟ್, ಬೆಳ್ಮಣ್ಣು, ಉಡುಪಿ ಇವರು ಅತಿಥಿಗಳಾಗಿ ಆಗಮಿಸಲಿದ್ದು, ‘ಆಧುನಿಕ ಕನ್ನಡ ಗದ್ಯ ಬರವಣಿಗೆಯ ಹೆಜ್ಜೆಗಳು’ ವಿಷಯದ ಕುರಿತು ಉಪನ್ಯಾಸ ನೀಡುವರು.

ದಿನಾಂಕ 23 ನವೆಂಬರ್ 2021, ಶನಿವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘದ ಭವನದಲ್ಲಿ 94ನೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸಂಘದ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ರಾಜ್ಯೋತ್ಸವದ ಅಂಗವಾಗಿ ದಿ: 16-11-24ರಂದು ಪದವಿ ವಿದ್ಯಾರ್ಥಿಗಳಿಗೆ ಅಯೋಜಿಸಿದ್ದ ಸಮೂಹ ಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಇರುತ್ತದೆ.

Karnataka Sanga Shivamogga ಮುಖ್ಯ ಅತಿಥಿಗಳಾಗಿ ಡಾ. ಟಿ.ಎಸ್. ನಾಗಾಭರಣ, ಖ್ಯಾತ ಚಲನಚಿತ್ರ ನಿರ್ದೇಶಕರು, ಬೆಂಗಳೂರು ಇವರು ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಅಧ್ಯಕ್ಷತೆಯನ್ನು ವಹಿಸಲಿದ್ದಾರೆ,

ದಿನಾಂಕ 22 ಮತ್ತು 23 ರಂದು ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಶ್ರೀ ಎಸ್. ಚಂದ್ರಕಾಂತ್ ಹಾಗೂ ಡಾ. ಶ್ರೀಕಾಂತ್ ಎನ್. ಹೆಗಡೆ ಇವರಿಂದ ಹಳೆಯ ಅಂಚೆ ಚೀಟಿ ಮತ್ತು ನಾಣ್ಯಗಳು ಹಾಗೂ ವನ್ಯಜೀವಿ ಛಾಯಾಚಿತ್ರ ಪ್ರದರ್ಶನವಿರುತ್ತದೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಸಂಘದ ಸದಸ್ಯರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...