Thursday, September 10, 2026
Thursday, September 10, 2026

Shivaganga Yoga Centre ಯೋಗಾಭ್ಯಾಸದಿಂದ ಮನುಷ್ಯರಲ್ಲಿ ಧನಾತ್ಮಕ ಬದಲಾವಣೆ ಕಾಣಬಹುದು- ಸಿ.ವಿ.ರುದ್ರಾರಾಧ್ಯ

Date:

Shivaganga Yoga Centre ಬದುಕು ಸುಂದರಗೊಳಿಸಲು ಹಾಗೂ ಸದಾ ಲವಲವಿಕೆಯಿಂದ ಆರೋಗ್ಯದಿಂದ ಇರಲು ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಅತ್ಯಂತ ಸಹಕಾರಿಯಾಗುತ್ತದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಅಭಿಪ್ರಾಯಪಟ್ಟರು.
ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಯೋಗ, ಧ್ಯಾನ, ಪ್ರಾಣಾಯಾಮ ತರಬೇತಿ ಮತ್ತು ಮಾಹಿತಿ ಶಿಬಿರದಲ್ಲಿ ಮಾತನಾಡಿ, ಮನುಷ್ಯ ತನ್ನಲ್ಲಿನ ಅಸೂಯೆ, ಹೊಟ್ಟೆಕಿಚ್ಚು, ನಕರಾತ್ಮಕ ಭಾವನೆಗಳನ್ನು ತೊರೆಯಬೇಕು. ದುರಾಸೆ ಬಿಟ್ಟು ನೆಮ್ಮದಿ ಹಾಗೂ ಸಂತೋಷದ ಜೀವನ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬರೂ ಯೋಗ ಅಭ್ಯಾಸ ಮಾಡುವುದು ಒಳ್ಳೆಯದು. ಯೋಗ, ಧ್ಯಾನ, ಪ್ರಾಣಾಯಾಮವನ್ನು ಅಭ್ಯಾಸ ಮಾಡುವುದರಿಂದ ದೇಹದ ಆರೋಗ್ಯ ಸದೃಢಗೊಳ್ಳುತ್ತದೆ. ಒತ್ತಡರಹಿತ ಜೀವನ ನಡೆಸಲು ಸಾಧ್ಯವಾಗುತ್ತದೆ. ಆಯುಷ್ಯ ವೃದ್ಧಿ ಜತೆಯಲ್ಲಿ ತೃಪ್ತಿಕರ ಬದುಕು ನಮ್ಮದಾಗುತ್ತದೆ ಎಂದರು.
Shivaganga Yoga Centre ಯೋಗದ ಅಭ್ಯಾಸದಿಂದ ಮನುಷ್ಯನದಲ್ಲಿ ಧನಾತ್ಮಕ ಬದಲಾವಣೆ ಕಾಣಬಹುದಾಗಿದೆ. ಜೀವನಶೈಲಿ ಉತ್ತಮಗೊಳ್ಳುವ ಮೂಲಕ ಉನ್ನತ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಅನೇಕರು ಯೋಗ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಮನಶಾಂತಿ ಮತ್ತು ಏಕಾಗ್ರತೆ ವೃದ್ಧಿಸುವ ಯೋಗ ಕಾರ್ಯಕ್ರಮ, ಒತ್ತಡ ಆತಂಕ ನಿರ್ವಹಣೆ ಬಗ್ಗೆ ಎಸ್.ವ್ಯಾಸ ಅವರು ಯೋಗ ವಿಶ್ವವಿದ್ಯಾಲಯ ನಿರ್ಮಿತ ತರಬೇತಿಯನ್ನು ನೀಡಿದರು.
80ಕ್ಕೂ ಹೆಚ್ಚು ಯೋಗ ಪ್ರಶಿಕ್ಷಣಾರ್ಥಿಗಳು ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದರು. ರಾಘವ ಶಾಖೆ ಯೋಗ ಶಿಕ್ಷಕರಾದ ಜಿ.ಎಸ್.ಓಂಕಾರ್, ವೈ.ಎಸ್.ವಿಜಯಕೃಷ್ಣ, ಎಚ್.ಕೆ.ಹರೀಶ್, ನರಸೋಜಿ ರಾವ್, ಜಿ.ವಿಜಯಕುಮಾರ್, ಸುಜಾತಾ ಮಧುಕೇಶ್ವರ, ಗಾಯತ್ರಿ ಅಶೋಕ್, ಮಹೇಶ್, ಎಸ್.ಟಿ.ಆನಂದ್, ಶಂಕರ್, ಶಶಿಧರ್, ಶಿವಕುಮಾರ್, ದೀಪಕ್, ಸುರೇಖಾ, ಅಜಯ್, ಅರುಣ್, ಸುಮಂತ್, ಸತೀಶ್ ಉಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...