Monday, February 2, 2026
Monday, February 2, 2026

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Date:

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗದ ವಿಕಾಸ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 23ರಂದು ಸಂಜೆ 5:00 ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಚಿಂತಕರು ಮತ್ತು ಲೇಖಕರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿ ಅವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕವಿಗಳು ಮತ್ತು ತುಂಗಾ ತರಂಗ ದಿನಪತ್ರಿಕೆ ಸಂಪಾದಕರಾದ ಶ್ರೀ ಎಸ್ ಕೆ ಗಜೇಂದ್ರ ಸ್ವಾಮಿ, ವಿಭಾಗಿಯ ಸಂಚಾಲಕರಾದ ಶ್ರೀ ಹರ್ಷ , ಸಂಪರ್ಕ ಪ್ರಮುಖರಾದ ಶ್ರೀ ಸತ್ಯನಾರಾಯಣ , ಕಾರ್ಯದರ್ಶಿ ಸುರೇಶ್ ಭಟ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

Akhila Bharatiya Sahitya Parishad ಶಿವಮೊಗ್ಗ ಜಿಲ್ಲೆಯ ಕವಿ ಕವಯಿತ್ರಿಯರಾದ ಮಂಜುನಾಥ್ ಎಚ್. ಬುಳ್ಳಾಪುರ, ರಮೇಶ್ ಭದ್ರಾವತಿ, ಚೇತನಾ ಅಜ್ಜಿಹಳ್ಳಿ , ಮೇದಿನಿ ಕೆಸವೆಮನೆ, ಸಂತೋಷ್ ಬಿದರಗದ್ದೆ, ಎಸ್ ರುದ್ರೇಶ್ ಆಚಾರ್ , ಶುಭಾ ಕುಸ್ಕೂರು , ಶಾರದಾ ಉಳುವೆ, ಅಂಜುಮ್.ಬಿ.ಎಸ್., ಕನಕಾ ರಾಜಾರಾಂ, ಪೂರ್ಣಿಮಾ ಪ್ರಸನ್ನ, ಮನು ಶಿವಮೊಗ್ಗ, ಮಮತಾ ಹೆಗ್ಡೆ, ಮತ್ತು ಪದ್ಮಾ ದಿವಾಕರ್ ಇವರು ಕವನ ವಾಚನ ಮಾಡಲಿದ್ದಾರೆ.

ಕನ್ನಡ ಅಭಿಮಾನಿಗಳು , ಕನ್ನಡ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...