Monday, February 2, 2026
Monday, February 2, 2026

Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ

Date:

Dinesh Gundurao ಗುಂಡುರಾವ್‌ರವರು ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಮ. 3.00ಕ್ಕೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಿರೆಮನೆ ಹಾಗೂ ತಲವಾಟ ಗ್ರಾಮಗಳಲ್ಲಿ ಮಂಗನಕಾಯಿಲೆ (ಕೆ.ಎಫ್.ಡಿ) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮ. 4.00ಕ್ಕೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಸಂಜೆ 5.00ಕ್ಕೆ ಸಾಗರದ ಪ್ರವಾಸಿ ಮಂದಿರದಲ್ಲಿ ಮಂಗನಕಾಯಿಲೆ ಕಂಡುಬAದಿರುವ ಜಿಲ್ಲೆಗಳಲ್ಲಿ ಕೈಗೊಂಡಿರುವ/ಕೈಗೊಳ್ಳಬೇಕಾಗಿರುವ ಸುರಕ್ಷಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7.00 ಸಾಗರದಿಂದ ಶಿವಮೊಗ್ಗಕ್ಕೆ ಆಗಮಿಸಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಲಿದ್ದಾರೆ.

Dinesh Gundurao ನ. 27ರಂದು ಬೆಳಗ್ಗೆ 8.20ಕ್ಕೆ ಭದ್ರಾವತಿ ತೆರಳಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೆ. 9.25 ಭದ್ರಾವತಿಯಿಂದ ಶಿವಮೊಗ್ಗ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ: 2.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ. ಹಿದಾಯತ್ತುಲ್ಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...