Monday, February 2, 2026
Monday, February 2, 2026

Poorna Prajna School ಓದು & ಕ್ರೀಡೆ ಎರಡನ್ನೂ ಸಮಾನ ಸ್ವೀಕರಿಸಿ- ಶ್ರೀಕೃಷ್ಣ ಉಪಾಧ್ಯಾಯ

Date:

Poorna Prajna School ಭದ್ರಾವತಿ,ನ.22, ದೈಹಿಕ ಶಿಕ್ಷಣ ಶಿಕ್ಷಕರು ಸಂಸ್ಥೆಯ ಆಧಾರಸ್ಥಂಭ ವಿದ್ದ ಆಗೆ, ಶಾಲೆಗಳಲ್ಲಿ ಮಕ್ಕಳಿಗೆ ದೈಹಿಕ ಶಿಕ್ಷಣ ಶಿಕ್ಷಕರು ಅಂದರೆ ಬಹಳ ಅಚ್ಚುಮೆಚ್ಚು ಎಂದು ಪೂರ್ಣಪ್ರಜ್ಞಾ ಶಾಲೆಯ ಸಹ ಕಾರದರ್ಶಿಯಾದ ಪ್ರೊಫೆಸರ್ ಶ್ರೀ ಕೃಷ್ಣ ಉಪಾಧ್ಯಾಯರು ಅಭಿಪ್ರಾಯ ಪಟ್ಟರು.
ಅವರು ಭದ್ರಾವತಿಯ ಪೂರ್ಣ ಪ್ರಜ್ಞಾ ಶಾಲೆಯಲ್ಲಿಇಂದಿನಿಂದ ಎರಡು ದಿನ ನಡೆಯಲಿರುವ ಅಂತರ್ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡುತ್ತಾ,ತಮ್ಮ ಜೀವನದಲ್ಲಿ ಓದಿನ ಜೊತೆಗೆ ಶಿಸ್ತು ಅನ್ನುವಂತದ್ದು ಬಹಳ ಮುಖ್ಯ, ಓದು ಮತ್ತು ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷಕ, ಶಿವಲಿಂಗೇಗೌಡ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ,
ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.
Poorna Prajna School ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಮನಸ್ಸು ಮತ್ತು ದೇಹದ ಬೆಳವಣಿಗೆಯು ಸಮಾನವಾಗಿ ಬೆಳೆಯಲು ಕ್ರೀಡೆ ಸಹಕಾರಿ ಎಂಬುದು ನಮಗೆಲ್ಲರಿಗೂ ತಿಳಿದಿದೆ.
ಆಟಗಳು ಮತ್ತು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ, ಅದಕ್ಕಾಗಿಯೇ ದೈಹಿಕ ತರಬೇತಿ, ವ್ಯಾಯಾಮ ಮತ್ತು ಆಟಗಳಿಲ್ಲದೆ – ಶಿಕ್ಷಣವು ಅಪೂರ್ಣವಾಗಿರುತ್ತದೆ. ಅಲ್ಲದೆ, ಶಿಕ್ಷಣದ ಜೊತೆಗೆ, ಆಟಗಳು ಸಹ ನಮ್ಮೆಲ್ಲರನ್ನೂ ಎದ್ದು ನಿಲ್ಲಲು ಮತ್ತು ಜೀವನದ ಎಲ್ಲಾ ಕಠಿಣ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುತ್ತವೆ. ಆಟಗಳನ್ನು ಆಡುವಾಗ, ವಿದ್ಯಾರ್ಥಿಗಳು ಆಮ್ಲಜನಕದ ಉತ್ತಮ ಸೇವನೆಯನ್ನು ತೆಗೆದುಕೊಳ್ಳುತ್ತಾರೆ, ಅವರ ರಕ್ತ ಪರಿಚಲನೆ ಹೆಚ್ಚಾಗುತ್ತದೆ ಎಂದರು.
ಪೂರ್ಣಪ್ರಜ್ಞ ಶಾಲೆಯ ಕಾರ್ಯದರ್ಶಿಯಾದ ಡಾ.ವಿನೀತ್ ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಅಮರೇಗೌಡ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಜಯಶ್ರೀ , ವಿಜಯಲಕ್ಷ್ಮಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...