Wednesday, April 23, 2025
Wednesday, April 23, 2025

N Gopinath ಪಾಠದ ಜೊತೆ ವಿದ್ಯಾರ್ಥಿಗಳಿಗೆ ಸಾಹಸ,ಸಾಮಾಜಿಕ ಅರಿವು ಮೂಡಿಸುವುದು ಮುಖ್ಯ- ಎನ್.ಗೋಪಿನಾಥ್

Date:

N Gopinath ವಿದ್ಯಾರ್ಥಿಗಳ ಪಾಠ ಪ್ರವಚನ ಜೋತೆಗೆ ಸಾಹಸ, ಪ್ರವಾಸ, ಸಾಮಾಜಿಕ ಅರಿವು ಕುರಿತು ಜಾಗ್ರತಿ ಮೂಡಿಸುವುದು ಸಮಾಜದ ಕರ್ತವ್ಯ ಎಂದು ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಅಧ್ಯಕ್ಷರಾದ ಎನ್.ಗೋಪಿನಾಥ್, ಸಹ್ಯಾದ್ರಿ ಕಲಾ ಕಾಲೇಜ್, ಮಂಗಳೂರು ಇನ್ಸಿಟ್ಯೂಟ್ ಆಫ್ ಅಂಕಾಲಜಿ ತೀರ್ಥಹಳ್ಳಿ, ಸಹಾಸ ಮತ್ತು ಸಂಸ್ಕೃತಿ ಅಕಾಡಮಿ, ಮಥುರ ರಜತಮಹೋತ್ಸವ ಸಮಿತಿ ಸಹಯೋಗದಲ್ಲಿ ಆಯೋಜಿಸಿದ ಕವಲೇದುರ್ಗ ಚಾರಣ, ಕವಿಶೈಲ, ಕ್ಯಾನ್ಸರ್ ಕುರಿತು ಜಾಗೃತಿ ಪ್ರವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
N Gopinath ವಿದ್ಯಾಭ್ಯಾಸದ ಜೊತೆ ಸಾಮಾಜಿಕ ಕಳಕಳಿ, ಜನ ಸಾಮಾನ್ಯರಲ್ಲಿ ಇರುವ ಅಳುಕು ಹಾಗೂ ಇತಿಹಾಸ ಪ್ರಸಿದ್ದ ಸ್ಥಳ ದರ್ಶನದಿಂದ ಸುಲಭವಾಗಿ ಅರಿವು ಮೂಡುತ್ತದೆ. ಜೊತೆಗೆ ಸಾಹಸ ಮತ್ತು ನಮ್ಮ ಸಂಸ್ಕೃತಿಯನ್ನು ಬಿಂಭಿಸಿದ ಮಹನೀಯರ ಜನ್ಮ ಸ್ಥಳಕ್ಕೆ ಪ್ರವಾಸ ಏರ್ಪಡಿಸಿರುವುದರ ಸದುಪಯೋಗ ಪಡಿಸಿಕೊಳ್ಳ ಬೇಕೆಂದು ಕಿವಿ ಮಾತು ಹೇಳಿದರು.
ಸಹಾಸ ಮತ್ತು ಸಂಸ್ಕೃತಿ ಬಗ್ಗೆ ಆಗಿಂದಾಗೆ ಈ ರೀತಿಯ ಕಾರ್ಯಕ್ರಮ ಆಯೋಜಿಸುತ್ತೇವೆ. ಅದರ ಸದುಪಯೋಗವನ್ನು ಆಗಿಂದಾಗೆ ಸಹ್ಯಾದ್ರಿ ಕಲಾ ಕಾಲೇಜ್ ವಿದ್ಯಾರ್ಥಿಗಳು ಉಪಯೋಗಿಸಿ ಕೊಳ್ಳುತ್ತಿದ್ದಾರೆ ಎಂದು ಆ.ನ.ವಿಜಯೇಂದ್ರ ರಾವ್ ತಿಳಿಸಿದರು.
ತರುಣೋದಯ ಘಟಕದ ಛೇರ್ಮನ್ ಎಸ್.ಎಸ್.ವಾಗೇಶ್, ಇತಿಹಾಸ ಅಕಾಡಮಿ ಕಾರ್ಯದರ್ಶಿ ದಿಲೀಪ್ ನಾಡಿಗ್, ಸಹ್ಯಾದ್ರಿ ಕಾಲೇಜ್ ಪ್ರಾಧ್ಯಾಪಕರುಗಳು ಐವತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....