Sunday, December 14, 2025
Sunday, December 14, 2025

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

Date:

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಯಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮದ್ಯವರ್ಜನ ಶಿಬಿರ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದರು.
ನವುಲೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ನಡೆದ ೧೮೯೦ನೇ ಮದ್ಯವರ್ಜನ ಶಿಬಿರದ ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಂದರು.
ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
SP Mithun Kumar ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಶೇಖರಪ್ಪ, ಸೂಡಾ ಅಧ್ಯಕ್ಷ ಸುಂದರೇಶ್, ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಪಿ ಪಿ ಶಿಬಿರಾಧಿಕಾರಿ ನಂದಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ, ವಿವಿಧ ಸಂಘಟನೆಗಳ ಪ್ರಮುಖರಾದ ರಮೇಶ್, ಉದಯಕುಮಾರ್ ಶೆಟ್ಟಿ, ಮಮತಾ ಶಿವಣ್ಣ, ರಮೇಶ್ ಕತ್ತಿಗೆ, ರಾಮಚಂದ್ರ, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...