Sunday, August 2, 2026
Sunday, August 2, 2026

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

Date:

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಯಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮದ್ಯವರ್ಜನ ಶಿಬಿರ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದರು.
ನವುಲೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ನಡೆದ ೧೮೯೦ನೇ ಮದ್ಯವರ್ಜನ ಶಿಬಿರದ ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಂದರು.
ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
SP Mithun Kumar ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಶೇಖರಪ್ಪ, ಸೂಡಾ ಅಧ್ಯಕ್ಷ ಸುಂದರೇಶ್, ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಪಿ ಪಿ ಶಿಬಿರಾಧಿಕಾರಿ ನಂದಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ, ವಿವಿಧ ಸಂಘಟನೆಗಳ ಪ್ರಮುಖರಾದ ರಮೇಶ್, ಉದಯಕುಮಾರ್ ಶೆಟ್ಟಿ, ಮಮತಾ ಶಿವಣ್ಣ, ರಮೇಶ್ ಕತ್ತಿಗೆ, ರಾಮಚಂದ್ರ, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...