Thursday, June 18, 2026
Thursday, June 18, 2026

B.Y. Raghavendra ಯೋಗದಲ್ಲಿ ಭಾರತೀಯರ ಸಾಧನೆ.ಎಲ್ಲರೂ ಅನುಸರಿಸುವಂಥದ್ದಾಗಿದೆ- ಸಂಸದ ರಾಘವೇಂದ್ರ

Date:

B.Y. Raghavendra ವಿಶ್ವಕ್ಕೆ ಯೋಗ ಮತ್ತು ಯೋಗದ ಮಹತ್ವವನ್ನು ಪರಿಚಯಿಸಿದ ದೇಶ ಭಾರತ ಎಂಬ ಹೆಮ್ಮೆ ನಮ್ಮದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಶಿವಮೊಗ್ಗ ಮಹಾನಗರಪಾಲಿಕೆಯು ಉದ್ಯಮನಿಧಿ ಯೋಜನೆ ಯಡಿಯಲ್ಲಿ ಮೂರು ಕೋಟಿ ರು. ಗಳ ವೆಚ್ಚದಲ್ಲಿ ಶಿವಮೊಗ್ಗದ ವಿನೋಬನಗರದಲ್ಲಿ ನೂತನವಾಗಿ ನಿರ್ಮಿಸಲಾದ ವಾಣಿಜ್ಯ ಸಂಕೀರ್ಣ ಹಾಗೂ ಐವತ್ತು ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಅಜಿತ ಯೋಗಕೇಂದ್ರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಯೋಗದಲ್ಲಿ ಭಾರತೀಯರ ಸಾಧನೆ ಎಲ್ಲರೂ ಅನುಸರಿಸುವಂತದ್ದು. ವಿಶ್ವದ ಸುಮಾರು 150 ದೇಶಗಳಲ್ಲಿ ಯೋಗವನ್ನು ಅಭ್ಯಸಿಸುತ್ತಿರುವುದು ಹೆಮ್ಮೆ ಎನಿಸಿದೆ. ಇದರಿಂದಾಗಿ ಜಾಗತಿಕವಾಗಿ ಭಾರತ ವಿಶ್ವಗುರುವಾಗಿ ಗುರುತಿಸಲಾಗುತ್ತಿದೆ. ಯೋಗ ವಿಶ್ವಮಾನ್ಯ ವಾಗಿದೆ ಎಂದರು.

B.Y. Raghavendra ಉತ್ತಮ ಸಂಸ್ಕೃತಿ, ಸಂಸ್ಕಾರಗಳಿರುವಲ್ಲಿ ಈ ರೀತಿಯ ಸದಾಚಾರ ಸದ್ವಿಚಾರಗಳು ಆಚರಣೆ ಬಂದು, ಸರ್ವರ ಹಿತಕಾಯುವ ಕಾರ್ಯಗಳು ನಡೆಯುತ್ತವೆ. ಶಾಸಕ ಚನ್ನಬಸಪ್ಪ ಅವರ ಸಮಾಜಮುಖಿ ಚಿಂತನೆಯ ಫಲದಿಂದಾಗಿ ಯೋಗ ಕೇಂದ್ರ ಶುಭಾರಂಭಗೊಂಡಿರುವುದು ಎಲ್ಲರಿಗೂ ಸಂತಸದ ಸಂಗತಿಯಾಗಿದೆ. ಅದಕ್ಕಾಗಿ ಶಾಸಕರು ಅಭಿನಂದನಾರ್ಹರು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಭೂಪಾಲ್, ಯೋಗ ಶಿಕ್ಷಕರಾದ ಶ್ರೀನಿವಾಸಮೂರ್ತಿ, ಅರವಿಂದ್, ಪಾಲಿಕೆ ಆಯುಕ್ತ ಶ್ರೀಮತಿ ಕವಿತಾ ಯೋಗಪ್ಪನವರ, ಎಸ್. ದತ್ತಾತ್ರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...