Monday, May 4, 2026
Monday, May 4, 2026

Yuvanidhi Scheme ಯುವನಿಧಿ ಯೋಜ‌‌ನೆಗೆ ಆನ್ ಲೈನ್ ನೋಂದಾಯಿಸಲು ಆಹ್ವಾನ

Date:

Yuvanidhi Scheme ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್‌ಲೈನ್ ನೋಂದಣಿ ಆಹ್ವಾನಿಸಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
2022-23ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ .

Yuvanidhi Scheme ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ಅಥವಾ ಸಹಾಯವಾಣಿ 18005999918 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...