Thursday, August 13, 2026
Thursday, August 13, 2026

Department of Archeology Museums and Heritage ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ

Date:

Department of Archeology Museums and Heritage ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.
ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ.
ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.
Department of Archeology Museums and Heritage ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೇಖವಾಗಿದೆ. ಶಾಸನವನ್ನು ಡಾ.ಜಗದೀಶ ಓದಿ ಅರ್ಥೈಸಿದ್ದು ಗ್ರಾಮಸ್ಥರಾದ ಡೈರಿ ಪರಶುರಾಮ, ಲೋಹಿತಾಚಾರ್, ಮಾಯಾಚಾರ್, ಶಿವಮೂರ್ತಪ್ಪ ಇವರುಗಳಿಗೆ ಧನ್ಯವಾದಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ-ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು(ಪುರಾತತ್ವ)(ಪ್ರ) ಡಾ.ಶೇಜೇಶ್ವರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...