Monday, February 2, 2026
Monday, February 2, 2026

Sulthan Diamonds and Gold ವಿಶ್ವ ವಜ್ರ ಪ್ರದರ್ಶನ, ಒಂದು ಅದ್ಭುತವಾದ ಆಭರಣಗಳ ಪ್ರದರ್ಶನ- ಶಿಲ್ಪಾ ಗೋಪಿನಾಥ್

Date:

Sulthan Diamonds and Gold ದಕ್ಷಿಣ ಭಾರತದ ಅತಿ ದೊಡ್ಡ ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ “ವಿಶ್ವ ವಜ್ರ ಪ್ರದರ್ಶನ”ವನ್ನು ಶಿವಮೊಗ್ಗ ನಗರದ ಗೋಪಿ ವೃತ್ತದ ಬಳಿ ಇರುವ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್‌ನಲ್ಲಿ ಉದ್ಘಾಟಿಸಲಾಯಿತು.

ಡಿಸೆಂಬರ್ 5 ರಿಂದ 15 ರವರೆಗೆ 10 ದಿನಗಳ ಕಾಲ ನಡೆಯುವ ಈ ಪ್ರದರ್ಶದನಲ್ಲಿ ಪಾಶ್ಚಿಮಾತ್ಯ ದೇಶಗಳ ಪ್ರಸಿದ್ಧ ಆಭರಣ ಮತ್ತು ವಜ್ರವನ್ನು ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗಿದೆ. ಇದನ್ನು ಖರೀಸಿದವರಿಗೆ ಫ್ಲಾಟ್ 8 ಸಾವಿರ ರೂ. ರಿಯಾಯತಿಯನ್ನೂ ಸಹ ಘೋಷಿಸಲಾಗಿದೆ.

ವಿವಿಧ ದೇಶಗಳ ಆಭರಣವನ್ನು ಮಹಿಳಾ ಉದ್ಯಮಿಗಳಾದ ಜಯಲಕ್ಷ್ಮೀ ಸ್ಟೀಲ್ ಕಾರ್ಪೊರೇಶನ್‌ನ ಜೆ ಕೆ ಶಶಿಕಲಾ, ಹೊಸನಗರ ಸರಕಾರಿ ಆಸ್ಪತೆಯ ಕಣ್ಣು ತಜ್ಞೆ ಡಾ|| ಶಂಶಾದ್ ಬೇಗಂ, ಎಸ್ ಎ ಫ್ಲವರ್ ಮತ್ತು ಡೆಕೋರೇಶನ್‌ನ ಮಾಲಕಿ ಶೆರ್ಲಿ ಕ್ಲೆಮೆಂಟ್, ಶಕ್ತಿ ಇನೋವೇಶನ್‌ನ ಸಿಇಓ ಶಿಲ್ಪಾ ಗೋಪಿನಾಥ, ಉದ್ಯಮಿ ಎಸ್ ಎಚ್ ಗಾಯತ್ರಿ, ರೂಪದರ್ಶಿ ಕೀರ್ತಿ ಶಿವಮೂರ್ತಿ ಮತ್ತು ಮೇಕಪ್ ಆರ್ಟಿಸ್ಟ್ ದೀನಾಜ್ ಅಯೂಮ್ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಲ್ಪಾ ಗೋಪಿನಾಥ್, ಇದೊಂದು ಅದ್ಭುತವಾದ ಆಭರಣಗಳ ಪ್ರದರ್ಶನವಾಗಿದ್ದು., ಹಿಂದೆಂದೂ ನೋಡಿರದ ಅಪೂರ್ವ ಸಂಗ್ರಹ ಇಲ್ಲಿದೆ. ಮಹಿಳೆಯರು ಇಷ್ಟಪಡುವ ಮತ್ತು ಮನ ಆಕರ್ಷಿಸುವ ಆಭರಣಗಳು ಇವಾಗಿದ್ದು, ಗ್ರಾಹಕರು ನಿಶ್ಚಿತವಾಗಿಯೂ ಇಷ್ಟಪಡುತ್ತಾರೆ ಎಂದರು.

Sulthan Diamonds and Gold ರೂಪದರ್ಶಿ ಕೀರ್ತಿ ಶಿವಮೂರ್ತಿ ಮಾತನಾಡಿ, ಹಿಂದೆಂದೂ ನೋಡಿರದ ವಜ್ರಾಭರಣಗಳ ಸಂಗ್ರಹ ಶಿವಮೊಗ್ಗದಂತಹ ನಗರದಲ್ಲಿ ನಡೆಯುತ್ತಿರುವುದು ನಗರದ ಗ್ರ್ರಾಹಕರ ಪಾಲಿಗೆ ವಿಶಿಷ್ಟವಾಗಿದೆ. ಮಹಿಳೆಯರು ವಿಶೇಷವಾಗಿ ಆಭರಣಪ್ರಿಯರು ಇದರ ಲಾಭ ಪಡೆಯಬೇಕು. ವಿದೇಶಿ ಆಭರಣಗಳ ಸಂಗ್ರಹವನ್ನು ಒಂದೇ ಸೂರಿನಡಿ ನೋಡು, ಖರೀದಿಸು ವ್ಯವಸ್ಥೆ ಮಾಡಿರುವುದು ಮೆಚ್ಚತಕ್ಕದ್ದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಟೋರ್ ಮ್ಯಾನೇಜರ್ ಅಜಿತ್ ಮತ್ತು ಶೋಯೆಬ್, ಅನೇಕ ಗ್ರಾಹಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...