Wednesday, August 12, 2026
Wednesday, August 12, 2026

World Human Rights Day ಜಿಲ್ಲಾಡಳಿತದಿಂದ ಡಿಸೆಂಬರ್ 10 ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಪೂರ್ವ ಸಿದ್ಧತೆ

Date:

World Human Rights Day ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಸರ್ಕಾರೇತರ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಡಿ.10 ರ ಬೆಳಿಗ್ಗೆ 9.45 ಕ್ಕೆ ಜಿ.ಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ ಸಿಇಓ ಹೇಮಂತ್ ಎನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೊಷ್ ಎಂ ಎಸ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಜಿಲ್ಲಾ World Human Rights Day ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಕರ್ನಾಟಕ ಮಾನ ಹಕ್ಕುಗಳ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಏಷ್ಯಾ ಖಂಡ ಮಾನವ ಹಕ್ಕುಗಳ ಒಕ್ಕೂಟದ ರಾಷ್ಟಾçಧ್ಯಕ್ಷ ಶ್ರೀನಿವಾಸಗೌಡರು, ಕರ್ನಾಕ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಮೀತಲ್, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷ ಎನ್.ವಿ.ಕೃಷ್ಣ, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ರಾಜ್ಯ ಸಹ ಕಾರ್ಯದರ್ಶಿ ಎಂ.ಎಂ.ಗೋಪಿ, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ರಾಜ್ಯ ಸಹ ಕಾರ್ಯದರ್ಶಿ ಮಹೇಶ್ ಎನ್ ಅತಿಥಿಗಳಾಗಿ ಪಾಲ್ಗೊಳ್ಳುವರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...