Monday, February 16, 2026
Monday, February 16, 2026

CM Siddharamaiah ಬಳ್ಳಾರಿ ಆಸ್ಪತ್ರೆ ಪ್ರಕರಣ ಮೃತ ಬಾಣಂತಿಯರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ- ಸಿದ್ಧರಾಮಯ್ಯ

Date:

CM Siddharamaiah ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಐವರು ಬಾಣಂತಿಯರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 7ರಿಂದ 11ರ ಅವಧಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗರ್ಭಿಣಿಯರ ಪೈಕಿ ಲಲಿತಮ್ಮ, ನಂದಿನಿ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ರಚಿಸಿದ್ದ ತನಿಖಾ ತಂಡ, ‘ಸರಣಿ ಸಾವಿಗೆ ಸರಕಾರದಿಂದ ಸರಬರಾಜು ಮಾಡಿದ ಐವಿ ಫೂಯಿಡ್ ಕಾರಣ’ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರಕಾರ ಪಶ್ಚಿಮ ಬಂಗಾ ಫಾರ್ಮಸ್ಯುಟಿಕಲ್ ಕಂಪನಿಯಿಂದ ಸರಬರಾಜು ಆಗಿದ್ದ ಐವಿ ಫೂಯಿಡ್ ಬಳಕೆ ಮಾಡದಂತೆ ನ.16 ರಂದು ಆದೇಶ ಹೊರಡಿಸಿತ್ತು.

CM Siddharamaiah ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಕಾಂಗ್ರೆಸ್‌ ನಿಂದ ಭಾನುವಾರ ಹಮ್ಮಿಕೊಂಡಿದ್ದ ಮತದಾರರ ಕೃತಜ್ಞತಾ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದರು.

ಅಲ್ಲದೆ, ಮೃತ ಕುಟುಂಬಗಳಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...