Friday, March 20, 2026
Friday, March 20, 2026

Institute of High Tech Education ವಾಣಿಜ್ಯರಂಗವು ವಿಶ್ವದ ಎಲ್ಲ ಕ್ಷೇತ್ರಗಳಿಗೂ ಸಂಪರ್ಕ ಸೇತುವೆ- ಡಾ.ಸುಪ್ರಿಯಾ

Date:

Institute of High Tech Education ವ್ಯಾಪಾರ ವಿನಿಮಯ ಗಳಿಲ್ಲದೆ ಬದುಕು ಸಾಧ್ಯವಿಲ್ಲ, ಇದನ್ನೇ ವಾಣಿಜ್ಯ ಎನ್ನಲಾಗುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸುಪ್ರಿಯಾ ಆರ್ ಅಭಿಪ್ರಾಯಪಟ್ಟರು.

ಬಾಪೂಜಿ ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದ ಇನ್ಸ್ಟಿಟ್ಯೂಟ್ ಆಫ್ ಹೈ ಟೆಕ್ ಎಜುಕೇಶನ್ ವತಿಯಿಂದ ಏರ್ಪಾಡಾಗಿದ್ದ ರಾಜ್ಯಮಟ್ಟದ ವಾಣಿಜ್ಯ ಪ್ರದರ್ಶನ ‘6ನೇ ವಾಣಿಜ್ಯೋತ್ಸವ’ವನ್ನು ಉದ್ಘಾಟಿಸಿ ಮಾತನಾಡುತ್ತಾ ವಾಣಿಜ್ಯ ರಂಗವು ವಿಶ್ವದ ಎಲ್ಲ ರಂಗಗಳಿಗೂ ಸಂಪರ್ಕ ಸೇತುವೆಯಂತೆ ಇದ್ದು ಇದು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಹಾಗೂ ನೌಕರಿಯನ್ನು ಸಹಾ ಒದಗಿಸುತ್ತಿದೆ, ವಿದ್ಯಾರ್ಥಿಗಳು ಭವಿಷ್ಯದ ಮಹತ್ತರ ವಾಣಿಜ್ಯೋದ್ಯಮಿಗಳಾಗಬೇಕು ಎಂದರು.

ಎಂ ಎಸ್ ಬಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೆ ಪ್ರೊಫೆಸರ್ ನೀಲಾಂಬಿಕಾ ಜಿ ಸಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತ ವಾಣಿಜ್ಯ ರಂಗವು ಕಾರ್ಪೊರೇಟ್ ಜಗತ್ತಿನ ಹೆಬ್ಬಾಗಿಲಿನಂತೆ ಇದ್ದು ಪ್ರಸ್ತುತ ವಿದ್ಯಾರ್ಥಿಗಳು ವಾಣಿಜ್ಯ ವಿಷಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ, ಕೇವಲ ಪದವಿ ಪಡೆದರೆ ಸಾಲದು ಸ್ಪಷ್ಟವಾದ ಕಲ್ಪನೆ ಹಾಗೂ ಯೋಜನೆಗಳು ಭವಿಷ್ಯದ ನಿರ್ಧಾರಗಳ ಬಗ್ಗೆ ಇರಬೇಕು ಎಂದರು.

Institute of High Tech Education ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಬಾಪೂಜಿ ಹೈಟೆಕ್ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ವೀರಪ್ಪನವರು ವಾಣಿಜ್ಯ ಪದವಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸ್ವಾಗತಾರ್ಹ ಎಂದರು. ರಾಷ್ಟ್ರೀಯ ಆರ್ಥಿಕ ಅಭಿವೃದ್ಧಿಗೆ ವಾಣಿಜ್ಯೋದ್ಯಮ ಅತ್ಯವಶ್ಯ, ವಾಣಿಜ್ಯೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ೪೫೦ ಕ್ಕೂ ಹೆಚ್ಚು ನೋಂದಣಿಗಳಾಗಿವೆ ಎಂದರು.

ಸಂಸ್ಥೆಯ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತ ಕೋರಿದರು. ಲಕ್ಷ್ಮಿ ರಜಪುತ್ ಮತ್ತು ಮೊಹಮ್ಮದ್ ಅದಿಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪ್ರಜ್ಞ ಎನ್, ಸಿ, ಸ್ಪೂರ್ತಿ ಸಿ. ಕೆ. ಹಾಡಿದರು.

ಅತಿಥಿಗಳ ಪರಿಚಯವನ್ನು ಸಿಂಚನಾ ವಿ, ರಕ್ಷಾ ಕೆ ಎನ್ ಮಾಡಿದರೆ ವಂದನೆಗಳನ್ನು ಪ್ರೊ. ನಾಗರಾಜ್ ಎಂ ಎಸ್ ಸಮರ್ಪಿಸಿದರು. ಮುಖ್ಯ ಅತಿಥಿಗಳು ವಾಣಿಜ್ಯ ಮಾದರಿಗಳನ್ನು ಆಸಕ್ತಿಯಿಂದ ವೀಕ್ಷಿಸಿದರು.

-ಚಿತ್ರ ಹಾಗೂ ವರದಿ: ಡಾ ಎಚ್. ಬಿ. ಮಂಜುನಾಥ-

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...