Monday, May 4, 2026
Monday, May 4, 2026

Rotary Club Shivamogga ಗಾಡಿಕೊಪ್ಪದಲ್ಲಿನ ತುಂಗಾ ಮೇಲ್ದಂಡೆ ಜೈವಿಕ ವೈವಿಧ್ಯ ಉದ್ಯಾನ ಸಂರಕ್ಷಣೆಗೆ ಅಮೆರಿಕ ರೋಟರಿ ಕ್ಲಬ್ ನಿಂದ ಧನ ಸಹಾಯ

Date:

Rotary Club Shivamogga ಶಿವಮೊಗ್ಗ ನಗರದ ಗಾಡಿಕೊಪ್ಪ ಪುರದಾಳು ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಕಾಲುವೆ ಪಕ್ಕದಲ್ಲಿರುವ ರೋಟರಿ ಬಯೋಡೈವರ್ಸಿಟಿ ಎರಡನೇ ಹಂತದ ಪಾರ್ಕ್ ಅಭಿವೃದ್ಧಿ ಹಾಗೂ ಪಾರ್ಕ್ ಸಂರಕ್ಷಣೆಗೆ ಅಮೇರಿಕಾ ಕ್ಯಾಲಿಫೋರ್ನಿಯಾದ ಮೊಡೆಸ್ಟೋ ರೋಟರಿ ಸಂಸ್ಥೆಯು 62 ಸಾವಿರ ಡಾಲರ್‌ಅನ್ನು ಗ್ಲೋಬಲ್ ಗ್ರ್ಯಾಂಟ್ ಮುಖಾಂತರ ಸಹಾಯಹಸ್ತ ನೀಡಿದೆ.

Rotary Club Shivamogga ಅಮೇರಿಕಾದ ಮೊಡೆಸ್ಟೋ ರೋಟರಿ ಕ್ಲಬ್‌ನ ಅಂತರಾಷ್ಟ್ರೀಯ ಸ್ಪಾನ್ಸರ್ ಅನಿಲ್ ಹಾಲಪ್ಪ ಮಾತನಾಡಿ, ನಮ್ಮ ಕ್ಲಬ್‌ನಲ್ಲಿ 250 ಸದಸ್ಯರಿದ್ದು, ಹಿಂದೆ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆ, ಸ್ಮಾರ್ಟ್ ಕ್ಲಾಸ್, ಶೌಚಗೃಹ, ನ್ಯಾಪ್ಕಿನ್ ಪ್ಯಾಡ್ ಬರ್ನರ್ ಹಾಗೂ ಶಾಲಾ ಅಭಿವೃದ್ಧಿಗೆ 20 ಸಾವಿರ ಡಾಲರ್ ನೀಡಿದ್ದು, ಸಮಾಜಮುಖಿ ಕಾರ್ಯಗಳಿಗೆ ಬಳಕೆಯಾಗಿದೆ. ಇದರಿಂದ ಪ್ರೇರಿತಗೊಂಡು ಈಗ ಪರಿಸರ ಸಂರಕ್ಷಣೆಗೆ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರೋಟರಿ ಬಯೋಡೈವರ್ಸಿಟಿ ಪಾರ್ಕ್ ಅಧ್ಯಕ್ಷ ಪ್ರೊ. ಎ.ಎಸ್.ಚಂದ್ರಶೇಖರ್ ಮಾತನಾಡಿ, ಮೊಡೆಸ್ಟೋ ರೋಟರಿ ಕ್ಲಬ್ ನೀಡಿರುವ ನೆರವು ಪರಿಸರ ಸಂರಕ್ಷಣೆಯ ಶ್ರೇಷ್ಠ ಕಾರ್ಯಕ್ಕೆ ಸದ್ವಿನಿಯೋಗವಾಗಲಿದೆ. ಪರಿಸರ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಕಾರ್ಯದರ್ಶಿ ಆನಂದಮೂರ್ತಿ ಮಾತನಾಡಿ, ಶಿವಮೊಗ್ಗದ 8 ರೋಟರಿ ಕ್ಲಬ್‌ಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಎಲ್ಲರೂ ಹೆಚ್ಚಿನ ಸಹಕಾರ ಮಾಡುತ್ತಿದ್ದಾರೆ ಎಂದರು. ಉಮೇಶ್ ಅವರು ಬಯೋಡೈವರ್ಸಿಟಿ ನಡೆದು ಬಂದ ಹಾದಿ ಕುರಿತು ವಿವರಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಲಯ 10ರ ಸಹಾಯಕ ಗವರ್ನರ್ ಎಸ್.ಆರ್.ನಾಗರಾಜ್, ರವೀಂದ್ರನಾಥ ಐತಾಳ, ಸುಂದರ್, ಭಾರತಿ ಚಂದ್ರಶೇಖರ್, ಮಂಜುನಾಥ್, ಕೆ.ಪಿ.ಶೆಟ್ಟಿ, ಜಗದೀಶ್, ರೋಟರಿ ಉತ್ತರ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...