Sunday, December 14, 2025
Sunday, December 14, 2025

Rotary Club Shivamogga ರಸಪ್ರಶ್ನೆ ಸ್ಪರ್ಧೆಯಿಂದ ಮಕ್ಕಳಲ್ಲಿ ಜ್ಞಾನ & ಕೌಶಲ್ಯ ವೃದ್ಧಿ-ಕಿರಣ್ ಕುಮಾರ್

Date:

Rotary Club Shivamogga ರಸಪ್ರಶ್ನೆ ಕಾರ್ಯಕ್ರಮದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ಜ್ಞಾನ ಹಾಗೂ ಕೌಶಲ್ಯ ಸಾಮರ್ಥ್ಯಗಳು ವೃದ್ಧಿಸುತ್ತವೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮೇಲಿನ ಹನಸವಾಡಿಯ ತುಂಗಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಅನೇಕ ಸೇವಾಕೊಡುಗೆಗಳನ್ನು ಸಹ ನಡೆಸುತ್ತಿದೆ ಎಂದರು.

Rotary Club Shivamogga ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕ ಜೆ.ಡಿ.ಬಸವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲೂ ಸಾಕಷ್ಟು ಪ್ರತಿಭೆ ಇದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಅವರ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ ಎಂದು ತಿಳಿಸಿದರು.

ರವಿ ಕೊಟೋಜಿ ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಸಪ್ರಶ್ನೆಗಳು ತುಂಬಾ ಪೂರಕವಾಗಿವೆ. ಮುಂಬರುವ ಪರೀಕ್ಷೆಗಳಲ್ಲಿ ಅವರಿಗೆ ಸಂಪೂರ್ಣ ಸಹಕಾರ ಸಿಗುತ್ತದೆ. ಇಂದಿನ ವಿದ್ಯಾಭ್ಯಾಸದಲ್ಲಿ ಒಂದೊಂದು ಅಂಕಗಳು ಸಹ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸೆಂಟ್ರಲ್‌ನ ರಮೇಶ್.ಎನ್ ಕಾರ್ಯಕ್ರಮದ ಸಂಯೋಜನೆ ಮಾಡಿದ್ದರು. ಜಿಲ್ಲಾ ಸಾಂಸ್ಕೃತಿಕ ವೈಸ್ ಚೇರ್ಮನ್ ಧರ್ಮೇಂದ್ರ ಸಿಂಗ್ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ದೀಪಾ ಶೆಟ್ಟಿ, ಜ್ಯೋತಿ ಶ್ರೀರಾಮ್, ರಾಜಶ್ರೀ ಬಸವರಾಜ್, ಅನ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ್, ತುಂಗಾ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...