Saturday, December 6, 2025
Saturday, December 6, 2025

Karnataka Amateur Boxing Association ಜಿಲ್ಲೆಯಲ್ಲಿ ಮೊದಲ ಬಾರಿಗೆ ಡಿ. 12 & 13 ರಂದು ಎಲೈಟ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ

Date:

Karnataka Amateur Boxing Association ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್(18 ವರ್ಷ ಮೇಲ್ಪಟ್ಟ) ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ನಡೆಯಲಿದ್ದು ಪಂದ್ಯಾವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 100 ಕ್ರೀಡಾಪಟುಗಳು ಆಗಮಿಸುತ್ತಿದ್ದಾರೆ. ಪಂದ್ಯಾವಳಿಯಲ್ಲಿ 10 ವಿವಿಧ ತೂಕದ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು ಇದರಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ (ಭಾರತ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆ) ಆಯೋಜಿಸುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಇದು ಕ್ರೀಡಾಪಟುಗಳಿಗೆ ಬಹುಮುಖ್ಯವಾದ ಕ್ರೀಡೆಯಾಗಿದ್ದು ಬಾಕ್ಸಿಂಗ್ ಭಾರತ ಸರ್ಕಾರದಲ್ಲಿ ಅತಿ ಪ್ರಾಮುಖ್ಯತೆಯುಳ್ಳ ಕ್ರೀಡಾಪಟ್ಟಿಯಲ್ಲಿ ಇದ್ದು ರಾಷ್ಟ್ರಮಟ್ಟದಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸ್ಕಾಲರ್ಶಿಪ್ ಕ್ರೀಡಾ ಕೋಟಾದಡಿ ಉದ್ಯೋಗ ಸರ್ಕಾರದ ಹಲವು ಸೌಲಭ್ಯಗಳು ದೊರೆಯುತ್ತದೆ.
Karnataka Amateur Boxing Association ಮತ್ತು ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಗುತ್ತದೆ ಹಾಗಾಗಿ ರಾಜ್ಯದ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಸಾಕಷ್ಟು ಅಭ್ಯಾಸ ಮಾಡಿ ಈ ಪಂದ್ಯಾವಳಿಗೆ ಬರುವುದರಿಂದ ಪಂದ್ಯಾವಳಿಗಳು ಸಾಕಷ್ಟು ರೋಮಾಂಚನವಾಗಿರುತ್ತದೆ
ಮತ್ತು ನಾಳೆ ಬೆಳಗ್ಗೆ 11 ಗಂಟೆಗೆ
ಪಂದ್ಯಾವಳಿ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಆದ ಶ್ರೀ ಕೆಎಸ್ ಈಶ್ವರಪ್ಪನವರು
ಮಾಡಲಿದ್ದು ಕ್ರೀಡಾಕೂಟಕ್ಕೆ ಚಾಲನೆಯನ್ನು ಶ್ರೀ ಮಿಥುನ್ ಕುಮಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಡಲಿದ್ದು
ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಶ್ರೀ ಎಚ್ ಸಿ ಯೋಗೇಶ್ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯ ನಾಯಕ್ ಮೆಟ್ರೋ ಹಾಸ್ಪಿಟಲ್ ಸಿಇಓ ಡಾಕ್ಟರ್ ತೇಜಸ್ವಿ ಸೇರಿದಂತೆ ಬಿಜೆಪಿ ಮುಖಂಡರಾದ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ವಿಶ್ವನಾಥ್ ಅರುಣ್ ಬಾಬು ಭಾಗವಹಿಸಲಿದ್ದು
ಪಂದ್ಯಾವಳಿಗೆ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾದ
ಕ್ವಾಲಿಫೈಡ್ ತೀರ್ಪುಗಾರರು ಆಗಮಿಸುತ್ತಿದ್ದಾರೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...