Friday, May 8, 2026
Friday, May 8, 2026

K.S. Eshwarappa ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಸರಿಯಲ್ಲ- ಮಾಜಿ ಡಿಸಿಎಂ ಕೆ .ಎಸ್.ಈಶ್ವರಪ್ಪ

Date:

K.S. Eshwarappa ಬೆಳಗಾವಿ ವಿಧಾನಸೌಧದ ಮುಂದೆ ಪಂಚಮಸಾಲಿ ಹೋರಾಟ ಹಾಗೂ ಲಾಠಿ ಚಾರ್ಜ್ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು .

ಯಾವುದೇ ಸಮಾಜ ಸ್ವಾಭಾವಿಕವಾಗಿ ಬೇಡಿಕೆಗಳಿಗೆ ಮನವಿ ಸಲ್ಲಿಸುತ್ತಾರೆ.
ಆದರೆ ಅದನ್ನು ಹೇಗೆ ಹ್ಯಾಂಡಲ್ ಮಾಡಬೇಕೆನ್ನುವುದು ಸರ್ಕಾರ ತಿಳಿದಿರಬೇಕು ಎಂದರು.

ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ.
ಪಂಚಮಸಾಲಿಯವರು ಮೊದಲೇ ಪ್ರತಿಭಟನೆ ಬಗ್ಗೆ ತಿಳಿಸಿದ್ದರು.ಸರ್ಕಾರದ ಕ್ರಮಕ್ಕೆ ನಾನು ಖಂಡನೆ ವ್ಯಕ್ತಪಡಿಸುತ್ತೇನೆ.ಸರ್ಕಾರ ಮೊದಲು ಎಲ್ಲರ ಮೇಲಿನ ಕೇಸು ವಾಪಸ್ ತೆಗೆದುಕೊಳ್ಳಬೇಕು.ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆ ಕೋರಬೇಕು.
ಲಾಠಿ ಚಾರ್ಜ್ ಮಾಡಿರುವುದು ಒಳ್ಳೆಯದಲ್ಲ ಎಂದರು.

K.S. Eshwarappa ಸರ್ಕಾರ ಬೇಡಿಕೆ ಬಗ್ಗೆ ಕೂತು ಮೊದಲು ಚರ್ಚೆ ಮಾಡಲಿ.ಲಾಠಿ ಚಾರ್ಜ್ ಕ್ರಮ ಸರಿಯಲ್ಲ.ವೈನಾಡುವಿಗೆ ಸಿಎಂ ಸಿದ್ಧರಾಮಯ್ಯ ಪರಿಹಾರ ಘೋಷಿಸಿದ್ದರು.
ಸಂತ್ರಸ್ತರಿಗೆ ಮನೆ ಕಟ್ಟಿ ಕೊಡುತ್ತೇವೆಂದು ಹೇಳಿದ್ದರು.
ಮನೆ ಕಟ್ಟಿಸಿ ಕೊಡ್ತಿನಿ ಎಂದು ಸಿಎಂ ಹೇಳಿದ್ದರು.
ಅದು ಕರುಣೆಯೂ ಅಲ್ಲ ಭಿಕ್ಷೆಯೂ ಅಲ್ಲ.
ಅವರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಮನಧಿ ಮನವೊಲಿಸಲು ಆ ತರಾ ಹೇಳಿದ್ದಾರೆ.

ಮುಸಲ್ಮಾನರನ್ನು ತೃಪ್ತಿ ಪಡಿಸಲು ಇವರು ಹೊಟಿದ್ದಾರೆ.
ರಾಜ್ಯದಲ್ಲೂ ಮನೆಗಳು ಬಿದ್ದಿವೆ.
ಶಿವಮೊಗ್ಗದಲ್ಲಿ ಮನೆಗಳು ಬಿದ್ದಿವೆ.ಅವರಿಗೂ ಪರಿಹಾರ ಮೊದಲು ನೀಡಲಿ.
ಅವರ ನಾಯಕರನ್ನು ಸಂತೃಪ್ತಿಗೊಳಿಸಲು ಸಿಎಂ ಸಿದ್ಧರಾಮಯ್ಯ ಪರಿಹಾರ ಘೋಷಿಸಿದ್ದಾರೆ ಅಷ್ಟೇ ಎಂದು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...