Sunday, December 14, 2025
Sunday, December 14, 2025

Bharatanatyam ಬೆಂಗಳೂರಿನಲ್ಲಿ ರಾಜ್ಯಮಟ್ಟದ ಭರತನಾಟ್ಯ / ಜಾನಪದ ನೃತ್ಯ ಸ್ಪರ್ಧೆ

Date:

Bharatanatyam ಬೆಂಗಳೂರು,ಡಿ.14 ನಗರದ ಶ್ರೀ ನಾಟ್ಯಂ ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ – 2024 ಆಯೋಜಿಸಿದೆ . ಬೆಂಗಳೂರಿನ ಶ್ರೀನಿಧಿ ಬಡಾವಣೆಯ 8 ನೇ ಮುಖ್ಯರಸ್ತೆಯಲ್ಲಿರುವ ಶ್ರೀನಿಧಿ ಸಭಾಂಗಣದಲ್ಲಿ ಡಿ. 22ರ ಬೆಳಗ್ಗೆ 10ಕ್ಕೆ ಸ್ಪರ್ಧೆ ನಡೆಸಲಾಗುತ್ತದೆ ಎಂದು ಶಿವಮೊಗ್ಗ ಮೂಲದ ಖ್ಯಾತ ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.
ಎರಡು ಪ್ರಾಕಾರದ ಸ್ಪರ್ಧೆ: ಭರತನಾಟ್ಯ ಮತ್ತು ಜಾನಪದ ನೃತ್ಯ – ವಿಭಾಗಗಳಲ್ಲಿ ಪ್ರತ್ಯೇಕವಾದ ಸ್ಪರ್ಧೆ ನಡೆಯಲಿದೆ . 8ವರ್ಷದ ಒಳಗಿನವರು, ಎಂಟರಿಂದ 12 ರಿಂದ ವರ್ಷದವರು, 16 ವರ್ಷ ಮೇಲ್ಪಟ್ಟವರ ಒಟ್ಟು ಮೂರು ವಿಭಾಗಗಳಲ್ಲಿ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ . ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಸಮಾಧಾನಕರ ಬಹುಮಾನ ವಿತರಣೆಯೂ ನಡೆಯಲಿದೆ . ಆಸಕ್ತ ಸ್ಪರ್ಧಿಗಳು ಸ್ಪರ್ಧಾ ಸಂದರ್ಭದಲ್ಲಿ ತಮ್ಮ ಜನ್ಮ ದಿನಾಂಕ ಖಾತರಿ ಪಡಿಸುವ ಆಧಾರ್ ಅಥವಾ ಯಾವುದೇ ದಾಖಲೆಗಳ ಪ್ರತಿಗಳನ್ನು ತರಬೇಕು. ಹೆಸರು ನೋಂದಣಿ ಮತ್ತು ವಿವರಗಳಿಗೆ 990088983 ಮತ್ತು 9513816649 ಸಂಪರ್ಕಿಸಬಹುದು ಎಂದು ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.
ಸಂಸ್ಥೆಯ ಹಿರಿಮೆ: ಬೆಂಗಳೂರಿನ ಕೊಣನ ಕುಂಟೆಯಲ್ಲಿ ೨೦೦೯ರಲ್ಲಿ ಶಿವಮೊಗ್ಗ ಮೂಲದ ವಿದುಷಿ ಪುಷ್ಪಲತಾ ಅವರಿಂದ ಚಾಲನೆಗೊಂಡ ಶ್ರೀ ನಾಟ್ಯಂ ಕಲಾ ಕೇಂದ್ರವು ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಧಾರೆ ಎರೆದಿದೆ. ಮಕ್ಕಳಿಗೆ
Bharatanatyam ಮಹತ್ವದ ಸೇವೆಯನ್ನು ಮಾಡುತ್ತ ಲೇ ರಾಜ್ಯದ ಪ್ರತಿಷ್ಠಿತ ಕರಾವಳಿ ಉತ್ಸವ , ಹಂಪಿ ಉತ್ಸವ, ಪಟ್ಟದಕಲ್ಲು ಉತ್ಸವ ಮತ್ತು ಮೈಸೂರು ದಸರಾ ಸೇರಿದಂತೆ ನೂರಾರು ಕಾರ್ಯಕ್ರಮಗಳಲ್ಲಿ ತನ್ನ ಛಾಪನ್ನು ಒತ್ತಿದೆ . ವಿದುಷಿ ಪುಷ್ಪಲತಾ ನೇತೃತ್ವದ ಈ ತಂಡ ಕಳೆದ ವರ್ಷ ಪಾಂಡಿಚೇರಿ ಮತ್ತು ಚಿದಂಬರಂನಲ್ಲಿ ಹಮ್ಮಿಕೊಂಡಿದ್ದ ಗಿನ್ನಿಸ್ ಮತ್ತು ಲಿಮ್ಕಾ ದಾಖಲೆಯ ಬೃಹತ್ ನೃತ್ಯ ಪ್ರಸ್ತುತಿಗಳಲ್ಲಿ ತನ್ನ ವಿಶೇಷತೆಯನ್ನು ಪ್ರದರ್ಶಿಸಿರುವುದು ವಿಶ್ವ ಮಾನ್ಯತೆಯನ್ನು ತಂದುಕೊಟ್ಟಿದೆ . ರಂಗ ಪ್ರವೇಶವನ್ನೂ ಮಾಡಿಸಿ ನವ, ಯುವ ಕಲಾವಿದರಿಗೆ ಶ್ರೀ ನಾಟ್ಯಂ ಸಂಸ್ಥೆ ಮನ್ನಣೆ ಒದಗಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...