Monday, February 2, 2026
Monday, February 2, 2026

Datta Jayanti 2024 ಚಾಂಚಲ್ಯ ಮುಕ್ತ ಏಕಾಗ್ರಮನವು ಭಗವದ್ ಭಕ್ತಿಗೆ ಅವಶ್ಯ-ಡಾ.ಎಚ್.ಬಿ.ಮಂಜುನಾಥ್

Date:

Datta Jayanti 2024 “ಚಿತ್ತ ಏಕಾಗ್ರತೆಯು ಭಕ್ತಿಗೆ ಅವಶ್ಯ” -ಶ್ರೀ ದತ್ತಾತ್ರೇಯ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ- (“ಅಸೂಯಾ ರಹಿತರು ದೇವರಿಗೆ ಪ್ರೀತಿ ಪಾತ್ರರು” ಚಿಂತಕ ಜಗನ್ನಾಥ ನಾಡಿಗೇರ್) ದಾವಣಗೆರೆ.ಡಿ.14. ಚಾಂಚಲ್ಯ ಮುಕ್ತ ಏಕಾಗ್ರ ಮನವು ಭಗವದ್ ಭಕ್ತಿಗೆ ಅವಶ್ಯ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಹೇಳಿದರು. ಅವರಿಂದು ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಾನಂದ ತೀರ್ಥಗುರು ಅಧ್ಯಾತ್ಮ ಮಂದಿರದಲ್ಲಿ ನೆರವೇರಿದ ಶ್ರೀ ದತ್ತಾತ್ರೇಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬ್ರಹ್ಮ ವಿಷ್ಣು ಶಿವ ಅಂದರೆ ಸೃಷ್ಟಿ ಸ್ಥಿತಿ ಲಯಗಳ ಸಮ್ಮಿಲನವಾಗಿರುವ ದತ್ತಾತ್ರೇಯರ ಸಂಕೇತ ವೆಂದರೆ ಸುಜ್ಞಾನವು ನಮ್ಮ ಚಿತ್ತದಲ್ಲಿ ಸದಾ ಸೃಷ್ಟಿಯಾಗುತ್ತಿರಬೇಕು ಇದು ಬ್ರಹ್ಮ ಮುಖದ ಸಂಕೇತ, ಅಂತಹ ಸುಜ್ಞಾನವು ನಮ್ಮ ಚಿತ್ತದಲ್ಲಿ ಸದಾ ಉಳಿದಿರಬೇಕು ಇದು ವಿಷ್ಣು ಮುಖದ ಸಂಕೇತ, ಅಜ್ಞಾನ ಅಸಂಬದ್ಧ ವಿಚಾರಗಳು ನಾಶವಾಗಬೇಕು ಇದು ಶಿವ ಮುಖದ ಸಂಕೇತವಾಗಿದೆ ಎಂದರು. ಚಿಂತಕ ಜಗನ್ನಾಥ ನಾಡಿಗೇರ್ ಮಾತನಾಡಿ ಅಸೂಯೆ ಇಲ್ಲದವರಿಗೆ ದೇವರು ಒಲಿಯುತ್ತಾರೆ Datta Jayanti 2024 ಎನ್ನುವುದೇ ಅನಸೂಯಾ ಅತ್ರಿಯರಿಗೆ ದತ್ತಾತ್ರೇಯರು ಮಗನಾಗಿ ಬಂದುದರ ಸಂದೇಶವಾಗಿದೆ, ಇಂತಹ ಏಕೀಕೃತ ಬಹು ದೇವತಾ ಉಪಾಸನೆ ನಮ್ಮ ಸನಾತನ ಚಿಂತನೆಯ ವಿಶೇಷತೆ ಎಂದರು. ರಾಜನಹಳ್ಳಿ ಹರಿಹರಪ್ಪ ಟ್ರಸ್ಟ್ ಹಾಗೂ ಭಕ್ತವೃಂದದವರಿಂದ ಕಾಕಡಾರತಿ ಶ್ರೀ ಗಣಪತಿ ಶ್ರೀ ವೀರಾಂಜನೇಯ ಪೂಜೆ ಶ್ರೀ ದತ್ತಾತ್ರೇಯ ಮೂರ್ತಿ ಹಾಗೂ ಶ್ರೀ ಗುರುಗಳ ಪಾದುಕೆಗೆ ಏಕಾದಶವರ್ತನ ರುದ್ರಾಭಿಷೇಕ ನೆರವೇರಿತು. ಆರ್ ಜಿ ನಾಗೇಂದ್ರ ಪ್ರಸಾದ್ ಆರ್‌ ಹೆಚ್ ಶ್ರೀಧರ ಶ್ರೇಷ್ಠಿ ಮುಂತಾಗಿ ಟ್ರಸ್ಟಿನ ಹಾಗೂ ಆಧ್ಯಾತ್ಮ ಮಂದಿರದ ಪ್ರಮುಖರು ಅಲ್ಲಿದ್ದರು. ಶ್ರೀ ದತ್ತಾತ್ರೇಯ ಮೂರ್ತಿಗೆ ಹೂವಿನ ಅಲಂಕಾರ ಸೇವೆಯನ್ನು ಡಾ.ಜಾಧವ್ ಕುಟುಂಬ ವರ್ಗದವರು ಮಾಡಿದ್ದರು. ಅಷ್ಠಾವಧಾನ,ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣೆಯೂ ಏರ್ಪಾಡಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...