Sunday, December 7, 2025
Sunday, December 7, 2025

Karnataka Public School Doddabathi ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವವರೇ ಭಾಗ್ಯವಂತರು- ಡಾ.ಎಚ್.ಬಿ.ಮಂಜುನಾಥ್

Date:

Karnataka Public School Doddabathi ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೇ ಭಾಗ್ಯವಂತರು ಏಕೆಂದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಅಧ್ಯಾಪಕ ಗಳಿದ್ದಾರೆ ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಹೇಳಿದರು.

ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ವಿದ್ಯಾರ್ಥಿಗಳಿಗೆ ಏರ್ಪಾಡಾಗಿದ್ದ ಪ್ರೇರಣಾದಾಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಉತ್ತಮ ಗುಣಮಟ್ಟದ ಅಧ್ಯಾಪಕ ವರ್ಗದೊಂದಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಸಹೃ ಈಗ ಉತ್ತಮವಾಗಿವೆ, ಆದ್ದರಿಂದ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಬುದ್ಧಿವಂತ ವಿದ್ಯಾರ್ಥಿಗಳನ್ನೇ ಆಯ್ದುಕೊಂಡು ಶೈಕ್ಷಣಿಕ ಸಾಧನೆ ತೋರಿಸುವುದು ದೊಡ್ಡದಲ್ಲ, ಸರ್ಕಾರಿ ಶಾಲಾ ಕಾಲೇಜುಗಳು ಸಾಮಾನ್ಯ ವಿದ್ಯಾರ್ಥಿಗಳನ್ನೂ ಸೇರಿಸಿಕೊಂಡು ಸಾಧನೆ ಮಾಡಬೇಕಾಗಿರುವುದು ಸವಾಲು ಎಂದರಲ್ಲದೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸಾಮರ್ಥ್ಯವೆಂಬುದು ಇದ್ದೇ ಇರುತ್ತದೆ, ಅಂದಂದಿನ Karnataka Public School Doddabathi ಪಾಠ ಪ್ರವಚನಗಳನ್ನು ಅಂದಂದೆ ಅರ್ಥ ಮಾಡಿಕೊಂಡಲ್ಲಿ ಪರೀಕ್ಷೆಗಾಗಿ ಪ್ರತ್ಯೇಕವಾಗಿ ಓದುವ ಅವಶ್ಯಕತೆಯೂ ಬರುವುದಿಲ್ಲ, ಪರೀಕ್ಷೆಯು ಭಯವನ್ನೂ ಉಂಟುಮಾಡುವುದಿಲ್ಲ, ಸಂತೋಷದಿಂದ ಪರೀಕ್ಷೆ ಎದುರಿಸಬಹುದು ಎಂಬುದನ್ನು ಉದಾಹರಣೆಗಳ ಸಹಿತ ಮಂಜುನಾಥ್ ವಿವರಿಸಿದರು.

ರಾಜ್ಯದ ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಸುಮಾರು 8 ಲಕ್ಷ 60 ಸಾವಿರ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡು ಅದರಲ್ಲಿ 6 ಲಕ್ಷ 31 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ ಪಿಯುಸಿಯಲ್ಲಿ 6,90,000 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡು 552,000 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಉತ್ತೀರ್ಣತೆಯ ಪ್ರಮಾಣ ಈ ವರ್ಷ ಇನ್ನು ಹೆಚ್ಚಾಗಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿಯ ಶ್ರುತಿ ಹಾಗೂ ಧರ್ಮರಾಜ್ ಉಪಸ್ಥಿತಿಯಲ್ಲಿ ಶಾಲೆಯ ಪ್ರಾಚಾರ್ಯ ಬಿ ಕೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಅಧ್ಯಾಪಕ ವರ್ಗದ ಶಿಲ್ಪಾಚಾರ್ ಹಾಗೂ ಸೌಮ್ಯ ನಿರೂಪಿಸಿದರೆ ಉಪಪ್ರಾಚಾರ್ಯ ಬೀರಪ್ಪನವರು ಪ್ರಾಸ್ತಾವಿಕ ನುಡಿಗಳ ನಾಡಿದರು ಭೀಮಪ್ಪನವರು ವಂದನೆಗಳನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...