Monday, February 2, 2026
Monday, February 2, 2026

Agricultural Science Centre shivamogga ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಅಣಬೆ ಉತ್ತಮ ಆಹಾರ- ಡಾ.ನಾಗರಾಜ

Date:

Agricultural Science Centre shivamogga ಅಣಬೆ ಒಂದು ಶಿಲೀಂದ್ರವಾಗಿದ್ದು, ಇದನ್ನು ಕೃಷಿ ತ್ಯಾಜ್ಯದಿಂದ ಬೆಳೆಯಬಹುದಾಗಿದೆ. ಈ ತಾಂತ್ರಿಕತೆ ಕುರಿತು ತರಬೇತಿಯಲ್ಲಿ ಮಾಹಿತಿ ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಿ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್. ಸಿ. ಜಗದೀಶ ಕರೆ ನೀಡಿದರು.

ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ದಿನಾಂಕ 16 ರಿಂದ 20ನೇ ಡಿಸೆಂಬರ್ 2024 ರವರೆಗೆ ಐದು ದಿನಗಳ ಕಾಲ ಏರ್ಪಡಿಸಲಾಗಿರುವ ‘ಅಣಬೆ ಬೇಸಾಯ’ ಕುರಿತ ವೃತ್ತಿ ಪರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಣಬೆ ಕುರಿತು ವಿವರಗಳನ್ನು ನೀಡಿದರು.

ಹಿರಿಯ ತಾಂತ್ರಿಕ ಅಧಿಕಾರಿ ಡಾ.ನಾಗರಾಜ, ಆರ್ ಮಾತನಾಡಿ, ಇದು ಒಂದು ಸಸಾರಜನಕಯುಕ್ತ ಮತ್ತು ವಿವಿಧ ಅನ್ನಾಂಗಗಳನ್ನು ಹೊಂದಿದ ಹಾಗೂ ಕೊಬ್ಬಿನಾಂಶರಹಿತವಾದ ಆಹಾರ ಪದಾರ್ಥವಾಗಿದ್ದು, ಇದನ್ನು ಎಲ್ಲರೂ ಸೇವಿಸಬಹುದೆಂದು ತಿಳಿಸಿದರು.

Agricultural Science Centre shivamogga ಈ ಅಣಬೆಯಲ್ಲಿ ಸಸಾರಜನಕದ ಅಂಶ ಇರುವುದರಿಂದ ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಕಾಣಬರುವ ಸಸಾರಜನಕ ಅಪೌಷ್ಟಿಕತೆಯನ್ನು ನೀಗಿಸಬಹುದು ಎಂದು ತಿಳಿಸಲಾಯಿತು. ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಇದು ಉತ್ತಮ ಆಹಾರ. ಮನುಷ್ಯನಿಗೆ ಆಹಾರದಲ್ಲಿ ದಿನಕ್ಕೆ 750 ಗ್ರಾಂ ನಷ್ಟು ಸಸಾರಜನಕದ ಸೇವನೆ ಅವಶ್ಯವಾಗಿದ್ದು, ಸಸಾರಜನಕ ಅಂಶವನ್ನು ಹೊಂದಿರುವ ಬೇಳೆಕಾಳುಗಳ ಉತ್ಪಾದನೆಯೂ ಕಡಿಮೆ ಇರುವುದರಿಂದ, ಸಸಾರಜನಕ ಅಂಶವುಳ್ಳ ಆಹಾರ ಪದಾರ್ಥಗಳಿಗೆ ಪರ್ಯಾಯವಾಗಿ ಈ ಅಣಬೆಯನ್ನುಆಹಾರದಲ್ಲಿ ಬಳಸಬಹುದೆಂದು ತಿಳಿಸಿದರು.

ಈ ಐದು ದಿನಗಳ ತರಬೇತಿಯಲ್ಲಿ ಅಣಬೆಯ ಉಪಯುಕ್ತತೆ, ವಿವಿಧ ಅಣಬೆ ಪ್ರಬೇಧಗಳ ಉತ್ಪಾದನಾ ತಾಂತ್ರಿಕತೆ, ಚಿಪ್ಪು ಅಣಬೆ ಬೇಸಾಯ ಪದ್ಧತಿ ಮತ್ತು ಬೀಜೋತ್ಪಾದನೆ ವಿಧಾನವನ್ನು ಪ್ರಾಯೋಗಿಕವಾಗಿ ವಿವರಿಸಲಾಗುವುದು. ಶಿಬಿರಾರ್ಥಿಗಳನ್ನು ಅಣಬೆ ಪ್ರಯೋಗಾಲಯ, ಜೈವಿಕ ಕೇಂದ್ರ, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇಲ್ಲಿಗೆ ಭೇಟಿ ಮಾಡಿಸಿ, ಅಣಬೆ ಬೆಳೆಯಲು ದೊರಕುವ ಸೌಲಭ್ಯಗಳ ಬಗ್ಗೆ ಇಲಾಖಾ ಸಿಬ್ಬಂದಿಗಳಿಂದ ಮಾಹಿತಿ ನೀಡಿಸಲಾಗುವುದು. ಅಲ್ಲದೆ, ತರಬೇತಿಯ ನಂತರ ಪ್ರತಿ ಶಿಬಿರಾರ್ಥಿಗೂ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಅಣಬೆ ಬೀಜವನ್ನು ಕೊಟ್ಟು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಕೊಡಲಾಗುವುದು.

ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ. ಕೆ.ಸಿ.ಶಶಿಧರ, ಸಹ ಸಂಶೋಧನಾ ನಿರ್ದೇಶಕರಾದ ಡಾ.ಎಸ್. ಪ್ರದೀಪ್, ಕೆ.ಶಿ.ನಾ.ಕೃ.ತೋ.ವಿ.ವಿ., ಸಹ ವಿಸ್ತರಣಾ ನಿರ್ದೇಶಕರಾದ ಡಾ. ಬಿ. ಸಿ. ಹನುಮಂತಸ್ವಾಮಿ, ಮತ್ತು ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಸಿ. ಸುನಿಲ್ ಇವರು ಉಪಸ್ಥಿತರಿದ್ದರು. ಒಟ್ಟು 30 ಶಿಬಿರಾರ್ಥಿಗಳು ಈ ಐದು ದಿನಗಳ ತರಬೇತಿಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...