Monday, May 4, 2026
Monday, May 4, 2026

D.S. Arun ಮಲೆನಾಡು ಗಿಡ್ಡ’ ತಳಿ ಸಂಶೋಧನೆ & ಮಾಹಿತಿ ಕೇಂದ್ರ ಪುನಃ ಆರಂಭಿಸಿ- ಡಿ.ಎಸ್.ಅರುಣ್.ಎಂಎಲ್ ಸಿ.

Date:

D.S. Arun ಮಲೆನಾಡ ಗಿಡ್ಡ ಗೋ ತಳಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಡಿ.ಎಸ್.ಅರುಣ್ ರವರ ಒತ್ತಾಯಿಸಿದರು.

ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಬೆಳಗಾವಿಯ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದಲ್ಲಿ, ಪಶು ವರ್ಗದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಮಲೆನಾಡು ಗಿಡ್ಡ ತಳಿಯ ಬಗ್ಗೆ ಅಧ್ಯಯನ ಕೈಗೊಳ್ಳಲು ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಸ್ಥಾಪಿಸಿದ ಮಲೆನಾಡು ಗಿಡ್ಡ ತಳಿ ಸಂಶೋಧನೆ ಹಾಗೂ ಮಾಹಿತಿ ಕೇಂದ್ರವನ್ನು ಪುನಹ ಪ್ರಾರಂಭಿಸಲು ಮಾನ್ಯ ಪಶು ಸಂಗೋಪನ ಸಚಿವರನ್ನು ಒತ್ತಾಯಿಸಿದರು.

D.S. Arun ಮಲೆನಾಡು ಗಿಡ್ಡ ಗೋವು ತಳಿ ಭೌಗೋಳಿಕ ಮಾನ್ಯತೆ ಹೊಂದಿದ್ದು, ಪ್ರಮುಖವಾಗಿ ಮಲೆನಾಡಿನ ಶಿವಮೊಗ್ಗ,ಚಿಕ್ಕಮಗಳೂರು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಈ ತಳಿ ಹೇರಳವಾಗಿ ಕಂಡುಬರುವಂತಾಗಿದೆ ಎಂದು ಉಲ್ಲೇಖಿಸಿ,ಈ ತಳಿಯ ಹಾಲಿನಲ್ಲಿ ಎ-2 ಕೆಸಿನ್ ಅಧಿಕವಿದ್ದು ಜಗತ್ತಿನಲ್ಲಿ ಕಡಿಮೆ ಕೊಲೆಸ್ಟ್ರಾಲ್ ಅಂಶ ಹೊಂದಿರುವುದು ದೃಢಪಟ್ಟಿರುತ್ತದೆ ಎಂದು ತಿಳಿಸಿದರು.

ಮಲೆನಾಡು ಗಿಡ್ಡ ತಳಿಯ ಹಾಲು ಮತ್ತು ಅದರ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಹಾಲಿನಲ್ಲಿರುವ ಔಷಧೀಯ ಗುಣದ ಬಗ್ಗೆ ಹಾಗೂ ರೋಗ ನಿರೋಧಕ ಶಕ್ತಿಯ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುವ ಸಲುವಾಗಿ ಮಳೆನಾಡು ಗಿಡ್ಡೆತಳಿ ಸಂಶೋಧನೆಗೆ ಅನುಕೂಲವಾಗುವಂತೆ ಮಾಹಿತಿ ಕೇಂದ್ರವನ್ನು ಪುನರಾರಂಭಿಸಬೇಕು, ಸಂಶೋಧನೆಗೆ ಸರ್ಕಾರ ಹೆಚ್ಚಿನ ಒತ್ತುಕೊಟ್ಟು ಅಗತ್ಯವಿರುವ ಅನುದಾನವನ್ನು ಸಹ ಬಿಡುಗಡೆ ಮಾಡಬೇಕೆಂದು ಡಿ.ಎಸ್.ಅರುಣ್ ರವರು ಮಾನ್ಯ ಪಶುಸಂಗೋಪನ ಸಚಿವರನ್ನು ಶೂನ್ಯ ವೇಳೆಯಲ್ಲಿ ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...