Sunday, December 14, 2025
Sunday, December 14, 2025

Karnataka Rakshana Vedike ಕೇವಲ ಕನ್ನಡ ಹೋರಾಟಕ್ಕಷ್ಟೇ ಅಲ್ಲ. ಸಹಾಯದಲ್ಲೂ ಮುಂದೆ ಬಂದ ಕರವೇ ಸ್ವಾಭಿಮಾನಿ ಬಣ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ ನಗರದಲ್ಲಿ ನಡೆದ 69ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಭುವನಗಿರಿಯಿಂದ ಕನ್ನಡ ಜ್ಯೋತಿಯನ್ನು ತಂದು ಕಾರ್ಯಕ್ರಮದ ಉದ್ಘಾಟನೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಕೃಷ್ಣೇಗೌಡರು ಹಾಗೂ ಕರವೇ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ ಟಿ.ಕೆ ಅನಿಲ್ ಕುಮಾರ್ ಹಾಗೂ ಮುಖ್ಯ ಅತಿಥಿಗಳಿಂದ ಕಾರ್ಯಕ್ರಮ ಉದ್ಘಾಟನೆ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರು ಹಾಗೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರಾದ ಶ್ರೀ ಕೆಬಿ ಪ್ರಸನ್ನ ಕುಮಾರ್. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಮೇಶ್ ರವರು ಹಾಗೂ ರೋಟರಿ ಅಧ್ಯಕ್ಷರು ಶಿವಮೊಗ್ಗ ಸೆಂಟ್ರಲ್ ನ ಶ್ರೀಯುತ ಕಿರಣ್ ಕುಮಾರ್ ಜಿ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಎಚ್ಎಸ್ ಕಿರಣ್ ಕುಮಾರ್ ವಹಿಸಿದ್ದರು. ಕೇವಲ ಹೋರಾಟಕ್ಕೆ ಅಷ್ಟೇ ಸೀಮಿಕ ಸೀಮಿತವಾಗದೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಹಾಯದಲ್ಲೂ ಮುಂದಿದೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಪಾಳ್ಯ ಗ್ರಾಮದ ಮಾರಿಕಾಂಬ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 20 ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಯಿತು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸೇವ ರತ್ನ ಪ್ರಶಸ್ತಿಯನ್ನು ನೀಡಲಾಯಿತು. Karnataka Rakshana Vedike ಸೇವ ರತ್ನ ಪ್ರಶಸ್ತಿ ವಿಜೇತರು ಶ್ರೀಯುತ ರೇವಣಸಿದ್ದಯ್ಯ ಅರಣ್ಯ ಇಲಾಖೆ ಶಿವಮೊಗ್ಗ ನಾಗರಾಜ್ ವನ್ಯಜೀವಿ ಮತ್ತು ಪತ್ರಿಕಾ ವಿಭಾಗ ಹಾಗೂ ದಾನಂ ಸಿನಿಮಾ ನಟ ಹಾಗೂ ಕಿರುಚಿತ್ರ ನಿರ್ಮಾಪಕರು ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ವಿಭಾಗದಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿ ಸಂಜನಾ ತಿವಾರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರಬಿಂದುವಾಗಿ ಪಂಚಭಾಷ ಚಲನಚಿತ್ರ ನಟ ರಘುರಾಜ್ ಮಲ್ನಾಡ್ ಅವರು ಭಾಗವಹಿಸಿದ್ದರು ಕೊನೆಯಲ್ಲಿ ಸಂಘದ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷರ ಮುಖಾಂತರ ಆದರ್ಶ ಪತ್ರವನ್ನು ನೀಡಲಾಯಿತು ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀಯುತ ಕವಿತಾ .ಸಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತುಈ ಕಾರ್ಯಕ್ರಮದ ನಿರೂಪಕರಾಗಿ ಶಂಕರ್ ಚೀಲೂರವರು ನೆರವೇರಿಸಿದರು ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು ಮತ್ತು ಪ್ರೀತಂ ಮಲೋಡಿ ಆರ್ಕೆಸ್ಟ್ರಾ ಇವರಿಂದ ರಸಮಂಜರಿ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಪದಾಧಿಕಾರಿಗಳು ಸಾರ್ವಜನಿಕರು ಗಣ್ಯರು ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಜಿಲ್ಲಾಧ್ಯಕ್ಷರುಕಿರಣ್ ಕುಮಾರ್ ಎಚ್ಎಸ್ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...