Thursday, March 19, 2026
Thursday, March 19, 2026

Ministry of Ayush ದೇಶಾದ್ಯಂತ ಶಾಲಾ ಕಾಲೇಜುಗಳಲ್ಲಿ “ಪ್ರಕೃತಿ ಪರೀಕ್ಷಾ ಅಭಿಯಾನ್

Date:

Ministry of Ayush “ಭಾರತ ಸರ್ಕಾರದ ಆಯುಷ್ ಇಲಾಖೆ ನವೆಂಬರ್ 26 ಸಂವಿಧಾನ ದಿನಾಚರಣೆಯ ದಿನದಿಂದ ಮಾಜಿ ಪ್ರದಾನಿ ವಾಜಪೇಯಿ ಇವರ ಹುಟ್ಟುಹಬ್ಬದ ದಿನಾಂಕ: ಡಿಸೆಂಬರ್ 25ರ ವರೆಗೆ ದೇಶಾದ್ಯಂತ ದೇಶ್ ಕಾ ಪ್ರಕೃತಿ ಪರೀಕ್ಷಾ ಅಭಿಯಾನ್ ಪ್ರಾರಂಭಗೊಂಡಿದೆ, ಇದರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅಭಿಯಾನದ ಕುರಿತು ಮಾಹಿತಿ, ಪ್ರಕೃತಿ ಪರೀಕ್ಷಾ ತಂತ್ರಾಂಶ ಉಪಯೋಗಿಸಿ ನಡೆಸಲಾಗುತ್ತಿದೆ. ಮಾನ್ಯ ರಾಷ್ಟಪತಿಯವರು ಈ ಅಭಿಯಾನವನ್ನು ಉದ್ಘಾಟನೆ ಮಾಡಿದ್ದಾರೆ.

ಎ.ಎಲ್.ಎನ್. ರಾವ್ ಮೆಮೋರಿಯಲ್ ಆಯುರ್ವೇದ ಮಹಾವಿದ್ಯಾಲಯ, ಕೊಪ್ಪ, ಇವರು ಈ ಯೋಜನೆಯನ್ನು ಚಿಕ್ಕಮಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಸುಮಾರು 5೦ ಸಾವಿರ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಈ ತಂತ್ರಾಂಶ ಆಧರಿಸಿ ಆಯುರ್ವೇದದ ಮಹತ್ವ, ವಿದ್ಯಾರ್ಥಿಗಳ ದೇಹ ಪ್ರಕೃತಿ ಪರೀಕ್ಷೆ, ಜೀವ ಪದ್ದತಿಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಂಡು ಹೋಗಬೇಕೆಂಬ ದಿನಚರಿಯ ಬಗ್ಗೆ ಪ್ರಮಾಣ ಪತ್ರವೂ ಸಹ ನೀಡಲಾಗುವುದೆಂದು ಡಾ|| ಅಲೋಕನಾಥ್, ಸಹಪ್ರಾಧ್ಯಾಪಕರು, ಎ.ಎಲ್.ಎನ್. ರಾವ್ ಮೆಮೋರಿಯಲ್ ಆಯುರ್ವೇದ ಮಹಾವಿದ್ಯಾಲಯ, ಕೊಪ್ಪ, ಇವರು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನಡೆಸುತ್ತಿರುವ ಎಲ್ಲಾ ಅಂಗಸಂಸ್ಥೆಗಳಲ್ಲಿ ಈ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

Ministry of Ayush ಎಲ್.ಬಿ. ಮತ್ತು ಎಸ್.ಬಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀಶ ಎ.ಎಸ್., ಎಂ.ಡಿ.ಎಫ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಿಲ್ಪ ವಿ.ಎನ್., ಮತ್ತು ಸಂಸ್ಥೆಯ ಕೋಶಾಧ್ಯಕ್ಷರಾದ ಕವಲಕೋಡು ವೆಂಕಟೇಶ್ ಇವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಡಾ|| ರಕ್ಷಿತಾ, ಸಹಪ್ರಾಧ್ಯಾಪಕರು, ಎ.ಎಲ್.ಎನ್. ರಾವ್ ಮೆಮೋರಿಯಲ್ ಆಯುರ್ವೇದ ಮಹಾವಿದ್ಯಾಲಯ, ಕೊಪ್ಪ ಮತ್ತು 26ಜನ ಆಯುರ್ವೇದ ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡು ಎಲ್ಲಾ ವಿದ್ಯಾರ್ಥಿಗಳ ತಪಾಸಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...