Saturday, December 6, 2025
Saturday, December 6, 2025

Innovative Kiddos ಆರೋಗ್ಯವಂತರಾಗಿರುವ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು-ಕ್ರಾಂತಿದೀಪ ಮಂಜುನಾಥ್

Date:

Innovative Kiddos Pre School  ಎಲ್ಲಾ ದಾನಗಳಿಗಿಂತ ರಕ್ತದಾನ ತುಂಬಾ ಶ್ರೇಷ್ಠವಾದ ದಾನ ಎಂದು ಕ್ರಾಂತಿ ದೀಪ ಪತ್ರಿಕೆಯ ಸಂಪಾದಕರು ಹಾಗೂ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಾದ ಏನ್ ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಇಂದು ಸರ್ವಜ್ಞನಗರ 3ನೇ ಕ್ರಾಸ್ ಬೊಮ್ಮನಕಟ್ಟೆ ಇನ್ನ ವೇಟಿವ್ ಕೇಡ್ಡೋಸ್ ಪೂರ್ವ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಈ ಕೆಡ್ಡೂಸ್ ಶಾಲೆ ಆಟ ಪಾಠ ಶಿಕ್ಷಣದ ಜೊತೆಗೆ ಸಮಾಜಮುಖಿ ಕೆಲಸಗಳಿಗೆ ಸಾಕ್ಷಿಯಾಗಿದ್ದು ಇದರ ಅಂಗವಾಗಿ ಇಂದು ಪೋಷಕರಿಗೆ ಮತ್ತು ನಾಗರೀಕರಿಗೆ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು , ಆಯೋಜಿಸಿದ ಶಾಲೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಮತ್ತು ಪೋಷಕರಿಗೆ ಅಭಿನಂದನೆ ಸಲ್ಲಿಸಿದರು ರಕ್ತದಾನ ಮಾಡುವುದರಿಂದ ಜೀವ ಉಳಿಸಿದ ಶ್ರೇಷ್ಠ ಕಾರ್ಯ ಆಗುತ್ತದೆ. ಆರೋಗ್ಯವಂತರಾಗಿರುವ ಪ್ರತಿಯೊಬ್ಬರು ರಕ್ತದಾನ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪೋಷಕರಾದ ಶರತ್ ರಾಜ್ ಯೋಗೀಶ್ ವಿನೋದ್ ಪ್ರಥಮ ಬಾರಿಗೆ ರಕ್ತದಾನ ಮಾಡಿ ದೀಪ
ಬೆಳಗಿಸಿದರು
ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ. ರಕ್ತದಾನ ಮಾಡುವುದರಿಂದ ನಮ್ಮ ದೇಹದ ಆರೋಗ್ಯ ಸದೃಢ ಆಗುತ್ತದೆ. ಅನೇಕ ರೀತಿಯಲ್ಲಿ ಉಪಯೋಗವಾಗುತ್ತದೆ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.

Innovative Kiddos Pre School  116 ಬಾರಿ ರಕ್ತ ದಾನ ಮಾಡಿದ ರಕ್ತದಾನಿ ಧರಣೇಂದ್ರ ದಿನಕರ್ ಮಾತನಾಡಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದ ಬೇಡಿಕೆ ಹೆಚ್ಚಿದ್ದು, ರಕ್ತದಾನ ಶಿಬಿರಗಳಿಂದ ಹೆಚ್ಚಿನ ಉಪಯೋಗ ಆಗುತ್ತಿದೆ. ಹೆಚ್ಚು ಬಾರಿ ರಕ್ತದಾನ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಅವಶ್ಯಕತೆ ಇರುವವರಿಗೆ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀ ರೇಖಾ ಬಸವರಾಜ್ ದಂಪತಿಗಳು 116 ಬಾರಿ ರಕ್ತ ದಾನ ಮಾಡಿದ ದಾನಿನ ಧರಣೇಂದ್ರ ದಿನಕರ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪೋಷಕರು ಶಿಕ್ಷಕರು ಸಾರ್ವಜನಿಕರು ರಕ್ತದಾನ ಮಾಡಿದರು ಸಮಾರಂಭದಲ್ಲಿ ಗುರುರಾಜ್. ಸುರೇಶ್. ರಕ್ತದಾನಿ ವಿಜಯಕುಮಾರ್ ವಸಂತ ಹೋಬಳಿದಾರ್
ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...