Thursday, March 19, 2026
Thursday, March 19, 2026

Kuvempu ಶಿಕಾರಿಪುರದಲ್ಲಿ ಕುವೆಂಪು ಜನ್ಮದಿನ ವಿಶೇಷ. ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ನಾಟಕ ಸ್ಪರ್ಧೆ

Date:

Kuvempu ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನದ ಪ್ರಯುಕ್ತ ಡಿ.೨೮ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಪದವಿ ಹಾಗೂ ಬಿ.ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಹಾಗೂ ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವುಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ ಸ್ಪರ್ಧೆ ಆಯೋಜಿಸಲಾಗಿದ್ದು, ಸಹ್ಯಾದ್ರಿ ರಂಗತರಂಗ ಶಿವಮೊಗ್ಗ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಸ್ಪರ್ಧೆ ನಡೆಯಲಿದೆ. ಶಾಸಕ ಬಿ.ವೈ. ವಿಜಯೇಂದ್ರ ಸ್ಪರ್ಧೆ ಉದ್ಘಾಟಿಸಲಿದ್ದಾರೆ.
Kuvempu ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ನಾಟಕ ಪ್ರದರ್ಶಿಸಲಿವೆ. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ ರೂ. ೮,೦೦೦, ದ್ವಿತೀಯ ಬಹುಮಾನ ರೂ. ೬, ೦೦೦ ಮತ್ತು ತೃತೀಯ ಬಹುಮಾನ ರೂ. ೪,೦೦೦ ನಗದು ನೀಡಲಾಗುವುದು. ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ಸಹ್ಯಾದ್ರಿ ರಂಗತರಂಗ ದ ಗೌರವಾಧ್ಯಕ್ಷ ಕಾಂತೇಶ್ ಕದರಮಂಡಲಗಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...