Thursday, March 19, 2026
Thursday, March 19, 2026

Rotary Club Shivamogga ಅತಿ ವೇಗ ಅಪಘಾತಕ್ಕೆ ಕಾರಣ. ಸುರಕ್ಷಿತವಾಗಿ ವಾಹನ ಚಲಾಯಿಸಿ- ಕೆ.ಬಿ.ಅಶೋಕ ನಾಯ್ಕ್

Date:

Rotary Club Shivamogga ಪ್ರತಿಯೊಬ್ಬರೂ ಸುರಕ್ಷಿತ ವಾಹನ ಚಾಲನೆ ಮಾಡಲು ಆದ್ಯತೆ ನೀಡಬೇಕು. ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಬಾರದು ಎಂದು ಮಾಜಿ ಶಾಸಕ, ಹಾಥಿರಾಮ್ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್, ಮಹರ್ಷಿ ಹಾಥಿರಾಮ್ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್, ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ನಗರದ ಅಕ್ಷರ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ರೋಟರಿ ಜಿಲ್ಲಾ ಕಾರ್ಯಕ್ರಮವಾದ ರಸ್ತೆ ಸಂಚಾರ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಎಲ್ಲ ಸಂಚಾರಿ ನಿಯಮವನ್ನು ಪಾಲಿಸಬೇಕು. ಅತಿ ವೇಗ ಅಪಘಾತಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷ ಕಿರಣ್ ಕುಮಾರ್.ಜಿ ಮಾತನಾಡಿ, ರೋಟರಿ ಸಂಸ್ಥೆ ರಸ್ತೆ ಸುರಕ್ಷತಾ ಸಂಚಾರಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಹಸಿರು ಮತ್ತು ನೀರಿನ ಅರಿವು, ಆರೋಗ್ಯ ಮತ್ತು ಸ್ವಚ್ಛತಾ ಶಿಕ್ಷಣ, ಕಾನೂನಿನ ಅರಿವು ಸೇರಿದಂತೆ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಸಮಾಜದ ಒಳಿತಿಗಾಗಿ, ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವುದರಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.

ಪಶ್ಚಿಮ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್.ಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಚಾರ ಜಾಗೃತಿ ನಿಯಮಗಳನ್ನು ವಿವರಿಸಿದರು. ವಿಡಿಯೋ ಪ್ರೆಸೆಂಟೇಷನ್ ಮೂಲಕ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಉಲ್ಲಂಘಿಸಿದರೆ ಆಗುವ ಪರಿಣಾಮಗಳ ಬಗ್ಗೆ ವಿವರಿಸಿದರು.

Rotary Club Shivamogga ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸದೆ, ಚಾಲನೆಯ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಂಚಾರಿ ನಿಯಮಗಳನ್ನು ಕೂಡ ಕಟ್ಟುನಿಟ್ಟಾಗಿ ಪಾಲಿಸಬೇಕು ಎನ್ನುವ ಅರಿವು ಮೂಡಿಸಿದಾಗ ಭವಿಷ್ಯದಲ್ಲಿ ಇಡೀ ಸಮಾಜ ಜಾಗೃತವಾಗುತ್ತದೆ ಎಂದು ತಿಳಿಸಿದರು.

ಅಕ್ಷರ ಕಾಲೇಜಿನ ಪ್ರಾಂಶುಪಾಲ ಗಿರೀಶ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನ ಬಸವರಾಜ್ ಬಿ, ಕ್ಲಬ್ ಸದಸ್ಯರಾದ ಧರ್ಮೇಂದ್ರ ಸಿಂಗ್, ರಾಜಶ್ರೀ ಬಸವರಾಜ್, ಅನ್ ಕ್ಲಬ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಕ್ಷರ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...