Friday, June 13, 2025
Friday, June 13, 2025

Shivamogga Chiranthana Yoga and Sangeeta Trust ಸುಗಮ ಸಂಗೀತ ಕಲಿಕೆಗೆ ಶ್ರದ್ಧೆ, ಏಕಾಗ್ರತೆ‌ & ಶ್ರಮ ಮುಖ್ಯ-ಡಾ.ಕಿಕ್ಕೇರಿ ಕೃಷ್ಣಮೂರ್ತಿ

Date:

Shivamogga Chiranthana Yoga and Sangeet Trust ಸುಗಮ ಸಂಗೀತದ ಕಲಿಕೆಯು ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಲು ನೆರವಾಗುತ್ತದೆ. ಕಲಾವಿದರಿಗೆ ವಿಶೇಷ ಸ್ಥಾನಮಾನ ನೀಡುತ್ತದೆ ಎಂದು ಬೆಂಗಳೂರಿನ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.

ಮಥುರಾ ಪ್ಯಾರಾಡೈಸ್‌ನಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ಶಿವಮೊಗ್ಗ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್, ಶಿವಮೊಗ್ಗ ವಿಜಯಪಥ ಮತ್ತು ವಿಕಾಸ ರಂಗ ವತಿಯಿಂದ ಆಯೋಜಿಸಿದ್ದ “ಒಲುಮೆಯ ಗೂಡು ಕುವೆಂಪು ಹಾಡು” ರಾಷ್ಟ್ರಕವಿ ಕುವೆಂಪು ಹಾಗೂ ಸಿ.ಅಶ್ವತ್ಥ್ ಜನ್ಮದಿನದ ಪ್ರಯುಕ್ತ ಗೀತಗಾಯನ ಸ್ಪರ್ಧೆಯ ಬಹುಮಾನ ವಿತರಣೆ, ಭೂಪಾಳಂ ವಿಜಯಕುಮಾರ್ ಸಮೂಹ ಗಾಯನ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ ಸಾಂಸ್ಕೃತಿಕ ಕ್ಷೇತ್ರದ ತವರೂರು. ಸಂಗೀತ ಕ್ಷೇತ್ರಕ್ಕೆ ಸುಗಮ ಸಂಗೀತ ಕ್ಷೇತ್ರದ ಕೊಡುಗೆ ಅಪಾರ. ಸುಗಮ ಸಂಗೀತ ಕಲಿಕೆಗೆ ಶ್ರದ್ಧೆ, ಭಕ್ತಿ, ಏಕಾಗ್ರತೆ ಹಾಗೂ ಶ್ರಮ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ರಂಗಮಂದಿರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

Shivamogga Chiranthana Yoga and Sangeet Trust ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಸುಗಮ ಸಂಗೀತ ನಮ್ಮ ಬದುಕಿಗೆ ಅತ್ಯಂತ ಅವಶ್ಯ. ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ನಾಡಿನ ದಿಗ್ಗಜ ಹಾಡುಗಾರರು ಮೂಲತಃ ಸುಗಮ ಸಂಗೀತ ಕ್ಷೇತ್ರದಿಂದ ಬಂದಿರುವವರು ಎಂದರು.

ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಸಿದ್ಧ ಗಾಯಕರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ, ಸುವರ್ಣ ವಿಜಯಕುಮಾರ್, ಪರಿಷತ್ ರಾಜ್ಯ ಘಟಕ ದ ಖಜಾಂಚಿ ವಿನಯ್ ಉಡುಪ, ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ರವಿ ಚವ್ಹಾಣ್, ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸ್ಥಾಪಕಿ ಶಾಂತಾ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...