Sunday, June 7, 2026
Sunday, June 7, 2026

Youth Hostel Association of India ಉತ್ತಮ ಸಮಾಜ ಕಾರ್ಯ ಜನರ ಮನಸ್ಸಿನಲ್ಲಿ ಉಳಿಯುತ್ತದೆ- ಎನ್.ಗೋಪಿನಾಥ್

Date:

Youth Hostel Association of India ಜೀವನದಲ್ಲಿ ನಾವು ಮಾಡಿದ ಉತ್ತಮ ಸೇವಾ ಕಾರ್ಯಗಳು ಸದಾ ಜನರ ಮನಸ್ಸಿನಲ್ಲಿ ನೆನಪಿನಲ್ಲಿ ಉಳಿಯುತ್ತವೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ವಾಗೀಶ್ ಅವರು ವೃತ್ತಿ ಜೀವನದ ಜತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವುದರ ಮುಖಾಂತರ ಜನರಿಗೆ ಹೆಚ್ಚು ಪರಿಚಿತರು. ನಿವೃತ್ತಿ ನಂತರ ಅವರ ಸೇವೆ ಇನ್ನೂ ಸಮಾಜಕ್ಕೆ ಹೆಚ್ಚು ಸಿಗಲಿ ಎಂದು ಹಾರೈಸಿ ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ಯೂತ್ ಹಾಸ್ಟೆಲ್ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವಾಗೀಶ್ ಅವರು ಯೂತ್ ಹಾಸ್ಟೆಲ್, ಸೈಕಲ್ ಕ್ಲಬ್, ಕರ್ನಾಟಕ ಸಂಘ. ವಿಕಾಸ ರಂಗ ಹಾಗೂ ರೋಟರಿ ಸಂಸ್ಥೆಗಳಲ್ಲಿ ನಿರಂತರವಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತ ಬಂದಿದ್ದಾರೆ. ನಿವೃತ್ತಿ ಜೀವನದ ನಂತರ ಇವರ ಸೇವೆ ಸಮಾಜಕ್ಕೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ದೊರಕಲಿ ಎಂದು ಅಭಿನಂದಿಸಿದರು.
Youth Hostel Association of India ಸನ್ಮಾನ ಸ್ವೀಕರಿಸಿ ವಾಗೀಶ್ ಮಾತನಾಡಿ, ಎಲ್ಲರಿಗೂ ಜೀವನ ಕಟ್ಟಿಕೊಳ್ಳಲು ಉದ್ಯೋಗ ಬೇಕು. ರಾಜ್ಯ ಹಣಕಾಸು ಸಂಸ್ಥೆ ನನಗೆ ಪ್ರಾರಂಭದಲ್ಲಿ ದಿನಗೂಲಿ ನಂತರ ಖಾಯಂ ಉದ್ಯೋಗ ನೀಡಿ ಸಹಕರಿಸಿದ್ದರಿಂದ ಉತ್ತಮ ಜೀವನ ನಡೆಸಲು ಅನುಕೂಲವಾಯಿತು. ಸಮಾಜ ಸೇವೆ ಮಾಡಲು ಸಹಕಾರಿಯಾಯಿತು. ಸಂಸ್ಥೆ ಅಧಿಕಾರಿಗಳು, ಸಹದ್ಯೋಗಿಗಳ ಮಾರ್ಗದರ್ಶನದಿಂದ ಪ್ರವರ್ತಕರು ಸಂತೃಪ್ತಿಯಿಂದ ನಮ್ಮ ಕಾರ್ಯ ಶ್ಲಾಘಿಸಿದ್ದಾರೆ. ಇದರಿಂದ ಸಮಾಜದ ಹಲವಾರು ಸಂಘಟನೆಯಲ್ಲಿ ಕೆಲಸ ಮಾಡಲು ಅವಕಾಶ ದೊರೆತಿದೆ. ವ್ಯಕ್ತಿಗತವಾಗಿ ಗುರುತಿಸಿಕೊಳ್ಳಲು ಸಾದ್ಯವಾಗಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಸುರೇಶ್ ಕುಮಾರ್, ನಿರ್ದೇಶಕರಾದ ಮಲ್ಲಿಕಾರ್ಜುನ್ ಕಾನೂರು, ಮಮತಾ, ಡಾ. ಗುರುಪಾದಪ್ಪ, ದಿಲೀಪ್ ನಾಡಿಗ್, ವೇಣುಗೋಪಾಲ್, ಗೋಪಿನಾಥ್, ರವಿಕುಮಾರ್, ನಾಗಲಾಬಿಕಾ, ಬಿಂದು ವಿಜಯಕುಮಾರ್, ರೇವಣ್ಣ, ಭಾರತಿ, ಮಮತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...