Wednesday, December 17, 2025
Wednesday, December 17, 2025

Bhadra Dam ನೀರಾವರಿ ರೈತರಿಗೆ ಗುಡ್ ನ್ಯೂಸ್.ಇನ್ನು 120 ದಿನ ಭದ್ರಾ ಎಡದಂಡೆ ನಾಲೆ ಓಪನ್

Date:

ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಂಶುಮಂತ್ ಅವರು ಹೇಳಿದರು.

ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿಯ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಭದ್ರಾ ಅಚ್ಚುಕಟ್ಟು ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ರೈತರ ಹಿತ ಕಾಯುವ ಬಹುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು.

Bhadra Dam ಮುಂದಿನ 100 20 ದಿನಗಳ ಕಾಲ ಭದ್ರಾ ಎಡದಂಡೆ ನಾಲಿಗೆ ಇಂದಿನಿಂದಲೇ ಹಾಗೂ ಜನವರಿ 8ರ ನಂತರ ನಿರಂತರವಾಗಿ ನೀರುಹರಿಸಲಾಗುವುದು ಎಂದ ಅವರು, ಈ ಸಂಬಂಧ ಈಗಾಗಲೇ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ ರೈತರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಆತಂಕಕ್ಕೆ ಒಳಗಾಗದಿರುವಂತೆ ಅವರು ಮನವಿ ಮಾಡಿದರು.

ಇಂದು ನಡೆದ 86ನೇ ನೀರಾವರಿ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ತಮ್ಮ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ ಅವರು, ಮಂಡಳಿಯು ರೈತರ ಅನುಕೂಲಕ್ಕಾಗಿ ಹಾಗೂ ರೈತರ ಹಿತ ಕಾಯುವ ನಿಟ್ಟಿನಲ್ಲಿ ಸಕಾಲಿಕ ನಿರ್ಣಯ ಕೈಗೊಂಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಸಕಾಲಿಕವಾಗಿ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದವರು ನುಡಿದರು.

ಪ್ರಸ್ತುತ ಜಲಾಶಯದಲ್ಲಿ 66. 96 ಟಿಎಂಸಿ ನೀರಿನಾ ಲಭ್ಯತೆ ಇದ್ದು ಮುಂದಿನ 120 ದಿನಗಳ ಅವಧಿಯಲ್ಲಿ 32 ಟಿಎಂಸಿ ನೀರು ಹರಿಸಲಾಗುವುದು. ನೀರಿನ ಮಿತ ಹಾಗೂ ಸದ್ಬಳಕೆಯ ಕುರಿತಂತೆ ಕಾಲಕಾಲಕ್ಕೆ ಅಧಿಕಾರಿಗಳ, ತಜ್ಞರ, ರೈತ ಮುಖಂಡರು ಉಪಸ್ಥಿತಿಯಲ್ಲಿ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದವರು ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀಮತಿ ಬಲ್ಕಿಶ್ ಬಾನು, ಕಾಡ ಆಡಳಿತ ಅಧಿಕಾರಿ ಸತೀಶ್, ತಾಂತ್ರಿಕ ಅಧಿಕಾರಿ ಪ್ರಶಾಂತ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...