Tuesday, April 29, 2025
Tuesday, April 29, 2025

Innovative Kid’s Preschool ಮಕ್ಕಳಿಗೆ ಒತ್ತಡ ಹೇರದೇ ಅವರ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಿ-ಡಾ.ಕೆ.ಎಲ್.ಶ್ರೀಪತಿ

Date:

Innovative Kid’s Preschool ಮಕ್ಕಳಿಗೆ ಒತ್ತಡ ಹಾಕದೇ ಅವರಲ್ಲಿನ ಆಸಕ್ತಿ, ಅಭಿರುಚಿ ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಬೇಕು. ಬಾಲ್ಯದಿಂದಲೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ಜೆಎನ್‌ಎನ್‌ಸಿಇ ನಿವೃತ್ತ ಉಪಪ್ರಾಂಶುಪಾಲ ಡಾ. ಎಲ್.ಕೆ.ಶ್ರೀಪತಿ ಹೇಳಿದರು.

ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಇನ್ನೋವೇಟಿವ್ ಕಿಡೋಸ್ ಪ್ರೀಸ್ಕೂಲ್ ವಾರ್ಷಿಕೋತ್ಸವದಲ್ಲಿ ಮಾತನಾಡಿ, ನಟನೆ, ಅಭಿನಯ, ರಂಗ ಚಟುವಟಿಕೆಗಳ ಮೂಲಕ ಪಾಠ ಪ್ರವಚನ ಮಾಡಬೇಕು. ಸ್ವಚ್ಛತೆ, ಶುಭ್ರತೆಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳ ಕೌಶಲ್ಯವನ್ನು ಹೆಚ್ಚಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ನಿವೃತ್ತ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಎಚ್.ವಿಶಾಲಾಕ್ಷಿ ಮಾತನಾಡಿ, ಪೋಷಕರು ಮನೆಯಲ್ಲಿ ಮಕ್ಕಳೊಂದಿಗೆ ಮಾತೃಭಾಷೆಯಲ್ಲಿ ಮಾತನಾಡಬೇಕು. ಶಿಕ್ಷಣ ಮತ್ತು ವೃತ್ತಿಗೆ ಅವಶ್ಯವಿರುವ ಆಂಗ್ಲ ಭಾಷೆ ಕಲಿಕೆಯು ಮುಖ್ಯ ಎಂದು ಹೇಳಿದರು.

Innovative Kid’s Preschool ಕನ್ನಡ ಭಾಷೆಯ ಸಣ್ಣಪುಟ್ಟ ಕಥೆಗಳನ್ನು ಪೋಷಕರು ಮನೆಯಲ್ಲಿ, ಶಿಕ್ಷಕರು ಶಾಲೆಯಲ್ಲಿ ಹೇಳುತ್ತಿರಬೇಕು. ಇದರಿಂದ ಅವರ ಭಾವ ಪ್ರಪಂಚ ಹಿರಿದಾಗುತ್ತದೆ. ಮೌಲ್ಯಗಳು ಅರ್ಥವಾಗುತ್ತವೆ. ಶ್ರಮ ಸಂಸ್ಕೃತಿ, ಮೌಲ್ಯಗಳು ಇತ್ಯಾದಿಗಳನ್ನು ಮಕ್ಕಳಲ್ಲಿ ಬಿತ್ತಬೇಕು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಇನ್ನೋವೇಟಿವ್ ಶಾಲೆ ಅತ್ಯಂತ ಕಡಿಮೆ ಸಮಯದಲ್ಲಿ ಪಾಠ ಪ್ರವಚನಗಳ ಜತೆಗೆ ಮೌಲ್ಯಧಾರಿತ ಶಿಕ್ಷಣವನ್ನು ಕೊಡುತ್ತಿದೆ. ಬೊಮ್ಮನಕಟ್ಟೆ ಭಾಗದಲ್ಲಿ ಒಂದು ಅತ್ಯುತ್ತಮವಾದ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಶಿಕ್ಷಣದ ಜತೆಗೆ ಸಾಮಾಜಿಕ ಕಳಕಳಿ ಹೊಂದಿ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ ಎಂದು ಹೇಳಿದರು.

ಭೂರಿಧಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಬಸವರಾಜ ಎಚ್. ದೇಸಾಯಿ, ಇನ್ನೊವೆಟಿವ್ ಕಿಡ್ಡೋಸ್ ಪ್ರಿ ಸ್ಕೂಲ್ ಪ್ರಾಂಶುಪಾಲರಾದ ರೇಖಾ.ಕೆ., ಶಿಕ್ಷಕರಾದ ಬಿಂದು, ಭಾಗ್ಯಶ್ರೀ, ಸುಮಾ, ಭರತ್ , ಸಂಗೀತ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...