Thursday, June 18, 2026
Thursday, June 18, 2026

Na. D’Souza ಸಾಹಿತಿ ನಾ.ಡಿಸೋಜಾ ನಿಧನಕ್ಕೆ ಶಿವಮೊಗ್ಗ ಅಭಾಸಾಪ ಸಂತಾಪ

Date:

ನಾಡಿನ ಖ್ಯಾತ ಸಾಹಿತಿ ಮತ್ತು ಲೇಖನಗಳಿಂದ ಜನಮನ ಸ್ಪಂದಿಸಿದ
ಡಾ.ನಾ.ಡಿಸೋಜಾ ಅವರ ನಿಧನದಿಂದ
ಮಲೆನಾಡಿನ ಬಹುಮುಖ್ಯ ಸಾಹಿತ್ಯಕ ಎಳೆಯೊಂದು ಕಡಿದಂತಾಗಿದೆ.
ತಮ್ಮ ಕತೆ ಕಾದಂಬರಿಗಳ ಮೂಲಕ ವರ್ತಮಾನದ ಸಾಮಾಜಿಕ ಬಿಗುವುಗಳಿಗೆ ಕಾರಣ ಮತ್ತು ಪರಿಣಾಮಗಳ ಬಗ್ಗೆ ತಮ್ಮದೇ ಶೈಲಿಯಲ್ಲಿ ಬಿಂಬಿಸಿದ್ದರು.

ಮಲೆನಾಡಿನ ಬನಿ ಅವರ ಬರವಣಿಗೆಗಳಲ್ಲಿ ಸದಾ ಒಳಧಾರೆಯಾಗಿ ವ್ಯಕ್ತವಾಗಿವೆ.

Na. D’Souza ಪತ್ರಿಕೆಗಳೇ ಅಲ್ಲದೆ ರೇಡಿಯೊ, ದೂರದರ್ಶನ ಮತ್ತು ಸಿನಿಮಾ ಮಾಧ್ಯಮಗಳಲ್ಲಿ
ಅವರ ಕೃತಿಗಳು ಪ್ರಕಟ,ಪ್ರಸಾರ ಮತ್ತು ಪ್ರೇಕ್ಷಕರ ಮನಗೆದ್ದಿವೆ.
ಭದ್ರಾವತಿ ಆಕಾಶವಾಣಿ ಕೇಂದ್ರದ ಮೂಲಕ ಅವರ ಹಲವು ಚಿಂತನ ಭಾಷಣಗಳು ಪ್ರಸಾರವಾಗಿವೆ.
ಅವರ ಪ್ರಖ್ಯಾತ ಕಾದಂಬರಿ ‘ಮುಳುಗಡೆ” ಭದ್ರಾವತಿ ಕೇಂದ್ರದ ಮೂಲಕ‌ ರೇಡಿಯೋ ರೂಪವಾಗಿ ಪ್ರಸಾರವಾಗಿದೆ.
ಅಸಂಖ್ಯ ಕೇಳುಗರ ಮೆಚ್ವುಗೆಯನ್ನೂ ಪಡೆದಿದೆ.
“ನಾಡಿ” ಈ ಬಗ್ಗೆ ಆಕಾಶವಾಣಿ ಭದ್ರಾವತಿ ಕೇಂದ್ರದ
ಬಗ್ಗೆ ಮೆಚ್ಚುಗೆ ಸೂಸಿ ಮಾತಾಡಿದ್ದರು.
ನಾಡಿನ ಸಾಹಿತ್ಯಕ ವಲಯದಲ್ಲಿ
ಅವರೊಬ್ಬ ಎಲ್ಲಧರ್ಮಗಳನ್ನೂ ಮೀರಿದ ಬರಹಗಾರರಾಗಿದ್ದರು ಎಂದು ಕೆ ಲೈವ್ ನ್ಯೂಸ್ ಪ್ರಧಾನ ಸಂಪಾದಕ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ
ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ ಅವರು ನಾ.ಡಿಸೋಜಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...