Wednesday, September 16, 2026
Wednesday, September 16, 2026

SC ST ಸಾಂಸ್ಕೃತಿಕ ಕಾರ್ಯಕ್ರಮಗಳು/ವಿಚಾರ ಸಂಕಿರಣ ಮೂಲಕ ಪಜಾ/ಪಪಂ, ದೌರ್ಜನ್ಯ ತಡೆ ಕಾಯ್ದೆಗಳ ಅರಿವು ಮೂಡಿಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

SC/ ST ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಬಗ್ಗೆ ಪರಿಶಿಷ್ಟ ಜಾತಿ ಮತ್ತು ವರ್ಗದ ಸಂಘ-ಸಂಸ್ಥೆಗಳು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘ/ಸಂಸ್ಥೆಗಳ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ/ಅರಿವು ಮೂಡಿಸಲು ವಿಚಾರಗೋಷ್ಟಿ ಮತ್ತು ಕಾರ್ಯಾಗಾರಗಳನ್ನು ನಡೆಸಲು ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ವಯಂ ಸೇವಾ ಸಂಘ/ಸಂಸ್ಥೆಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಘ/ಸಂಸ್ಥೆಗಳವರು ದಿ: 16-01-2025 ರ ಒಳಗಾಗಿ ಪೂರಕ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ, ಉಪ ನಿರ್ದೇಶಕರ ಕಚೇರಿ, ಪೃಥ್ವಿ ಮ್ಯಾನ್ಶನ್, 100 ಅಡಿ ರಸ್ತೆ, ವಿನೋಬನಗರ ಶಿವಮೊಗ್ಗ ಈ ಕಚೆರಿಗೆ ಪ್ರಸ್ತಾವನೆಯನ್ನು ಸಲ್ಲಿಸಬಹುದು.

SC/ ST ಸಂಘ/ಸಂಸ್ಥೆಯ ನೋಂದಣಿ ಪ್ರಮಾಣ ಪತ್ರ, ನವೀಕರಣ ಪ್ರಮಾಣ ಪತ್ರ, ಕಳೆದ 3 ವರ್ಷದ ಆಡಿಟ್ ರಿಪೋರ್ಟ್(2021-22 ರಿಂದ 23-24 ರರೆಗೆ), ಸಂಘ ಸಂಸ್ಥೆಯು ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ದಿಗಾಗಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರುವ ಬಗ್ಗೆ ದೃಢೀಕೃತ ದಾಖಲೆ, ಈ ಹಿಂದೆ ಸಂಘ/ಸಂಸ್ಥೆಯು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ದಾಖಲೆಗಳು, ಛಾಯಾಚಿತ್ರ, ಪತ್ರಿಕಾ ವರದಿ, ಸಂಸ್ಥೆಯು ದೌರ್ಜನ್ಯ ಪ್ರತಿಬಂಧ ಅಧಿನಿಯಮ-1989 ರ ಅನುಷ್ಟಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿರುವ ಬಗ್ಗೆ ದಾಖಲೆಗಳು, ಪ್ರಕಟಣೆಗಳು, ಕರಪತ್ರ, ಭಿತ್ತಿಪತ್ರ ಇತ್ಯಾದಿಗಳನ್ನು ಲಗತ್ತಿಸಿ ಪ್ರಸ್ತಾವನೆಯೊಂದಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...