Monday, February 2, 2026
Monday, February 2, 2026

Klive Special Article ನಂದನ್ “ಗೆ ನುಡಿ ನಮನ

Date:

Klive Special Article ನಮ್ಮೆಲ್ಲರ ಪ್ರೀತಿಯ ನಂದನ್ ಇನ್ನಿಲ್ಲ.
ಬರೆಯಲು ಬಹಳ ದುಃಖವಾಗಿದೆ.
ನಂದನ್ …
“ಶಿವಮೊಗ್ಗ ನಂದನ್” ಆಗುವ ಮುಂಚಿನಿಂದಲೂ
ನನಗೆ ಪರಿಚಿತರು. ಆತ್ಮೀಯರು.
ಶಿವಮೊಗ್ಗದ ಗಿಡಮರಗಳ ಉಳಿವಿನ ಬಗ್ಗೆ
ಹೋರಾಟ ಮಾಡಿದವರಲ್ಲಿ
ನಂದನ್ ಮುಂಚೂಣಿಗ.
ನಗರದಲ್ಲಿ ರಸ್ತೆ ಅಗಲೀಕರಣದ ಬಗ್ಗೆ ಸಾಲುಮರಕ್ಕೆ ಆಡಳಿತವು ಕೊಡಲಿ ಬೀಸಿ, ಜೆಸಿಬಿ ತಂದಾಗ ಆತ್ಮಹತ್ಯೆ ಅಂತಹ
ಪ್ರತಿಭಟನೆಗೆ ನಿಂತವರು.
ಪರಿಸರ ಪ್ರೀತಯ ಮುಂದೆ ಸರ್ಕಾರಿ ಸಿಬ್ಬಂದಿ ಸೋತು ಹಿಂದಡಿಯಿಟ್ಟ ಪ್ರಸಂಗಗಳಿವೆ.
ಶಿವಮೊಗ್ಗದಲ್ಲಿ ಮರ‌ಕಡಿತಲೆ ಅಂದರೆ
ನಂದನ್ ಮಬ ಮನುಷ್ಯ ಬಂದಾನು ಜೋಪಾನ ಎಂಬ
ಒಳದನಿ ಸರ್ಕಾರಿ ಸಿಬ್ಬಂದಿಗೆ ಹೇಳುತ್ತಿತ್ತು.
ನಂದನ್, ತುಂಬಾ ಚಂದದ ಚಿತ್ರಗಳನ್ನ ಅದರಲ್ಲೂ ಸುದ್ದಿ ಹಿನ್ನೆಲೆಯ ಫೋಟೋಗಳನ್ನ ಅಷ್ಟೇ ತಾಜಾತನದಿಂದ ತೆಗೆಯುವ ನಿಷ್ಣಾತ.
ಮಾತುಕತೆ ಮೃದು.
Klive Special Article ಭೇಟಿಯಾದರೆ ಸಾಕು ಮಾಧ್ಯಮ ,ಸುದ್ದಿ ಫೋಟೋಜನಿಕ್ ಎಲ್ಲದರ ಬಗ್ಗೆ ಮಾತಾಡುತ್ತಿದ್ದರು.
ತಮ್ಮ ಅಮೂಲ್ಯ ಅನುಭವಗಳನ್ನ ಹಂಚಿಕೊಳ್ಳುತ್ತಿದ್ದರು.

ನನಗೆ ಭೇಟಿಯಾದಾಗಲೆಲ್ಲಾ ಹೊಸ ಅನುಭವಗಳ ನೆನಪಿನ ಬುತ್ತಿ ಹಂಚಿಕೊಳ್ಳುತ್ತಿದ್ದರು.
ಕೆ ಲೈವ್ ಗೆ ಅವರ ವಿಶೇಷ ಮಾತುಕತೆಗೆ ಬನ್ನಿ ಎಂದು ಹೇಳೀಹೇಲಿ ಸೋತಿದ್ದೆ.
ಯಾಕೋ ಅವರು ಮನಸ್ಸು ಮಾಡಲಿಲ್ಲ.
ಇತ್ತೀಚೆಗೆ ಅಂತರ್ಮುಖಿಯಾಗಿ ಕಾಣುತ್ತಿದ್ದರು .
ಸ್ನೇಹಜೀವಿ.
ನಾನು ಭದ್ರಾವತಿ ಆಕಾಶವಾಣಿಯಲ್ಲಿ ಸೇವೆಯಲ್ಲಿದ್ದಾಗ ಯುವವಾಣಿ ಕಾರ್ಯಕ್ರಮದಲ್ಲಿ
ಯುವ ಛಾಯಾಚಿತ್ರಗ್ರಾಹಕ ಎಂದು ಸಂದರ್ಶಿಸಿದ್ದೆ.
ಅಂದಿನಿಂದ ಅವರು ನನಗೆ ಆತ್ಮೀಯರೇ ಆಗಿಬಿಟ್ಟಿದ್ದರು.
ಸುದ್ದಿ ಫೋಟೋ ಬೇಕೆಂದರೆ ತಕ್ಷಣ ಕಳಿಸುತ್ತಿದ್ದರು.

ನಂದನ್…ನೀವೀಗ ಇಲ್ಲ. ಒಂದು ಶೂನ್ಯ ಸ್ಪಷ್ಟಿಯಾಗಿದೆ.
ಆದರೆ ನೀವು ತೆಗೆದ ಸುದ್ದಿ ಫೋಟೋಗಳು ನಿಮ್ಮ ಬಗ್ಗೆ ಇನ್ನುಮುಂದೆ ಮಾತಾಡುತ್ತವೆ.
ನಿಮ್ಮ ಆತ್ಮಕ್ಕೆ
ಚಿರಶಾಂತಿ ಲಭಿಸಲಿ.
ನಮನ.

ಡಾ. ಸುಧೀಂದ್ರ ಚನ್ನಗಿರಿ
ಪ್ರಧಾನ ಸಂಪಾದಕರು ಕೆ ಲೈವ್ ನ್ಯೂಸ್ ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...