Thursday, March 19, 2026
Thursday, March 19, 2026

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ ರಂಗ ಸಂಕ್ರಾಂತಿ

Date:

Shivamogga Rangayana ಶಿವಮೊಗ್ಗ ರಂಗಾಯಣ, ಸಮುದಾಯ ಹಾಗೂ ಕಡೆಕೊಪ್ಪಲು ಪತ್ರಿಷ್ಠಾನದ ಸಹಯೋಗದೊಂದಿಗೆ ಜ.20 ರಿಂದ 22 ವರೆಗೆ ಸಂಜೆ 6.30 ಕ್ಕೆ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ ಸಂಕ್ರಾಂತಿ 2025 ಶಿರ್ಷೀಕೆ ಆಡಿಯಲ್ಲಿ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ನಾಟಕೋತ್ಸವವನ್ನು ನಾಟಕ ಅಂಕಣಕಾರರಾದ ಬಿ.ಚಂದ್ರೇಗೌಡ ಉದ್ಘಾಟಿಸಲಿದ್ದು, ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮುದಾಯದ ಕಾರ್ಯದರ್ಶಿ ಡಾ.ಕೆ.ಜಿ.ವೆಂಕಟೇಶ್, ಕಡೆಕೊಪ್ಪಲ ಪ್ರತಿಷ್ಠಾನದ ಮ್ಯಾನೆಜಂಗ್ ಟ್ರಸ್ಟಿ ಡಾ.ಕೆ.ಮಧುಸೂಧನ್ ಆಗಮಿಸಲಿದ್ದು, ರಂಗಾಯಣ ಅಡಳಿತಾಧಿಕಾರಿ ಡಾ.ಎ.ಸಿ.ಶೈಲಜಾ ಉಪಸ್ಥಿತರಿರುವರು.
Shivamogga Rangayana ಜ.20 ರ ಸಂಜೆ 6.30ಕ್ಕೆ ಬೆಂಗಳೂರಿನ ಅನೇಕತಂಡದಿಂದ ‘ಅಂಗವಿಲ್ಲದ ದೇಹದಲ್ಲಿ ಭಂಗೀಹುಳ ನಾಟಕ ನಡೆಯಲಿದ್ದು, ನಾಟಕದ ಮೂಲ ಕೆ.ಟಿ.ಗಟ್ಟಿ, ಮರುರಚನೆ ಹಾಗೂ ನಿರ್ದೇಶನ ಪರಿಕಲ್ಪನೆ ಸುರೇಶ ಆನಗಳ್ಳಿ, ಸಂಗೀತ ಭರತ್, ಸಹ ನಿರ್ದೇಶನ ಅಂಜನಾ.
ಜ.21 ರ ಸಂಜೆ 6.30ಕ್ಕೆ ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’ ನಾಟಕ ನಡೆಯಲಿದ್ದು, ನಾಟಕದ ಮೂಲ ಅಮೃತಾ ಪ್ರೀತಂ, ರಚನೆ ಸುಧಾ ಆಡುಕಳ, ಅಭಿಯನ ಶಾಲೋಮ್ ಸುನ್ನತ, ವಿನ್ಯಾಸ ಹಾಗೂ ನಿರ್ದೇಶನ ಡಾ.ಸವಿತಾರಾಣಿ, ಕಲೆ ಖಾಜುಗುತ್ತಲ, ಸಂಗೀತ ಮುನ್ನ ಮೈಸೂರು.
ಜ.22 ರ ಸಂಜೆ 6.30ಕ್ಕೆ ಮಣಿಪಾಲಿನ ಸಂಗಮ ಕಲಾವಿದರ ತಂಡದಿಂದ ನಿರಂಜನರ ಕಾದಂಬರಿಯ ರಂಗರೂಪ ‘ಮೃತ್ಯುಂಜಯ’ ನಾಟಕ ನಡೆಯಲಿದ್ದು, ರಂಗರೂಪ ಸಚಿನ್ ಅಂಕೋಲ, ನಿರ್ದೇಶನ ರೋಹಿತ್ ಎಸ್ ಬೈಕಾಡಿ ಮಾಡಿದ್ದಾರೆ. ಪ್ರತಿ ನಾಟಕಕ್ಕೂ ರೂ. 30 ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...