Monday, February 2, 2026
Monday, February 2, 2026

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ ರಂಗ ಸಂಕ್ರಾಂತಿ

Date:

Shivamogga Rangayana ಶಿವಮೊಗ್ಗ ರಂಗಾಯಣ, ಸಮುದಾಯ ಹಾಗೂ ಕಡೆಕೊಪ್ಪಲು ಪತ್ರಿಷ್ಠಾನದ ಸಹಯೋಗದೊಂದಿಗೆ ಜ.20 ರಿಂದ 22 ವರೆಗೆ ಸಂಜೆ 6.30 ಕ್ಕೆ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ ಸಂಕ್ರಾಂತಿ 2025 ಶಿರ್ಷೀಕೆ ಆಡಿಯಲ್ಲಿ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ನಾಟಕೋತ್ಸವವನ್ನು ನಾಟಕ ಅಂಕಣಕಾರರಾದ ಬಿ.ಚಂದ್ರೇಗೌಡ ಉದ್ಘಾಟಿಸಲಿದ್ದು, ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮುದಾಯದ ಕಾರ್ಯದರ್ಶಿ ಡಾ.ಕೆ.ಜಿ.ವೆಂಕಟೇಶ್, ಕಡೆಕೊಪ್ಪಲ ಪ್ರತಿಷ್ಠಾನದ ಮ್ಯಾನೆಜಂಗ್ ಟ್ರಸ್ಟಿ ಡಾ.ಕೆ.ಮಧುಸೂಧನ್ ಆಗಮಿಸಲಿದ್ದು, ರಂಗಾಯಣ ಅಡಳಿತಾಧಿಕಾರಿ ಡಾ.ಎ.ಸಿ.ಶೈಲಜಾ ಉಪಸ್ಥಿತರಿರುವರು.
Shivamogga Rangayana ಜ.20 ರ ಸಂಜೆ 6.30ಕ್ಕೆ ಬೆಂಗಳೂರಿನ ಅನೇಕತಂಡದಿಂದ ‘ಅಂಗವಿಲ್ಲದ ದೇಹದಲ್ಲಿ ಭಂಗೀಹುಳ ನಾಟಕ ನಡೆಯಲಿದ್ದು, ನಾಟಕದ ಮೂಲ ಕೆ.ಟಿ.ಗಟ್ಟಿ, ಮರುರಚನೆ ಹಾಗೂ ನಿರ್ದೇಶನ ಪರಿಕಲ್ಪನೆ ಸುರೇಶ ಆನಗಳ್ಳಿ, ಸಂಗೀತ ಭರತ್, ಸಹ ನಿರ್ದೇಶನ ಅಂಜನಾ.
ಜ.21 ರ ಸಂಜೆ 6.30ಕ್ಕೆ ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’ ನಾಟಕ ನಡೆಯಲಿದ್ದು, ನಾಟಕದ ಮೂಲ ಅಮೃತಾ ಪ್ರೀತಂ, ರಚನೆ ಸುಧಾ ಆಡುಕಳ, ಅಭಿಯನ ಶಾಲೋಮ್ ಸುನ್ನತ, ವಿನ್ಯಾಸ ಹಾಗೂ ನಿರ್ದೇಶನ ಡಾ.ಸವಿತಾರಾಣಿ, ಕಲೆ ಖಾಜುಗುತ್ತಲ, ಸಂಗೀತ ಮುನ್ನ ಮೈಸೂರು.
ಜ.22 ರ ಸಂಜೆ 6.30ಕ್ಕೆ ಮಣಿಪಾಲಿನ ಸಂಗಮ ಕಲಾವಿದರ ತಂಡದಿಂದ ನಿರಂಜನರ ಕಾದಂಬರಿಯ ರಂಗರೂಪ ‘ಮೃತ್ಯುಂಜಯ’ ನಾಟಕ ನಡೆಯಲಿದ್ದು, ರಂಗರೂಪ ಸಚಿನ್ ಅಂಕೋಲ, ನಿರ್ದೇಶನ ರೋಹಿತ್ ಎಸ್ ಬೈಕಾಡಿ ಮಾಡಿದ್ದಾರೆ. ಪ್ರತಿ ನಾಟಕಕ್ಕೂ ರೂ. 30 ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...