Tuesday, April 22, 2025
Tuesday, April 22, 2025

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ ರಂಗ ಸಂಕ್ರಾಂತಿ

Date:

Shivamogga Rangayana ಶಿವಮೊಗ್ಗ ರಂಗಾಯಣ, ಸಮುದಾಯ ಹಾಗೂ ಕಡೆಕೊಪ್ಪಲು ಪತ್ರಿಷ್ಠಾನದ ಸಹಯೋಗದೊಂದಿಗೆ ಜ.20 ರಿಂದ 22 ವರೆಗೆ ಸಂಜೆ 6.30 ಕ್ಕೆ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ ಸಂಕ್ರಾಂತಿ 2025 ಶಿರ್ಷೀಕೆ ಆಡಿಯಲ್ಲಿ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ನಾಟಕೋತ್ಸವವನ್ನು ನಾಟಕ ಅಂಕಣಕಾರರಾದ ಬಿ.ಚಂದ್ರೇಗೌಡ ಉದ್ಘಾಟಿಸಲಿದ್ದು, ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮುದಾಯದ ಕಾರ್ಯದರ್ಶಿ ಡಾ.ಕೆ.ಜಿ.ವೆಂಕಟೇಶ್, ಕಡೆಕೊಪ್ಪಲ ಪ್ರತಿಷ್ಠಾನದ ಮ್ಯಾನೆಜಂಗ್ ಟ್ರಸ್ಟಿ ಡಾ.ಕೆ.ಮಧುಸೂಧನ್ ಆಗಮಿಸಲಿದ್ದು, ರಂಗಾಯಣ ಅಡಳಿತಾಧಿಕಾರಿ ಡಾ.ಎ.ಸಿ.ಶೈಲಜಾ ಉಪಸ್ಥಿತರಿರುವರು.
Shivamogga Rangayana ಜ.20 ರ ಸಂಜೆ 6.30ಕ್ಕೆ ಬೆಂಗಳೂರಿನ ಅನೇಕತಂಡದಿಂದ ‘ಅಂಗವಿಲ್ಲದ ದೇಹದಲ್ಲಿ ಭಂಗೀಹುಳ ನಾಟಕ ನಡೆಯಲಿದ್ದು, ನಾಟಕದ ಮೂಲ ಕೆ.ಟಿ.ಗಟ್ಟಿ, ಮರುರಚನೆ ಹಾಗೂ ನಿರ್ದೇಶನ ಪರಿಕಲ್ಪನೆ ಸುರೇಶ ಆನಗಳ್ಳಿ, ಸಂಗೀತ ಭರತ್, ಸಹ ನಿರ್ದೇಶನ ಅಂಜನಾ.
ಜ.21 ರ ಸಂಜೆ 6.30ಕ್ಕೆ ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’ ನಾಟಕ ನಡೆಯಲಿದ್ದು, ನಾಟಕದ ಮೂಲ ಅಮೃತಾ ಪ್ರೀತಂ, ರಚನೆ ಸುಧಾ ಆಡುಕಳ, ಅಭಿಯನ ಶಾಲೋಮ್ ಸುನ್ನತ, ವಿನ್ಯಾಸ ಹಾಗೂ ನಿರ್ದೇಶನ ಡಾ.ಸವಿತಾರಾಣಿ, ಕಲೆ ಖಾಜುಗುತ್ತಲ, ಸಂಗೀತ ಮುನ್ನ ಮೈಸೂರು.
ಜ.22 ರ ಸಂಜೆ 6.30ಕ್ಕೆ ಮಣಿಪಾಲಿನ ಸಂಗಮ ಕಲಾವಿದರ ತಂಡದಿಂದ ನಿರಂಜನರ ಕಾದಂಬರಿಯ ರಂಗರೂಪ ‘ಮೃತ್ಯುಂಜಯ’ ನಾಟಕ ನಡೆಯಲಿದ್ದು, ರಂಗರೂಪ ಸಚಿನ್ ಅಂಕೋಲ, ನಿರ್ದೇಶನ ರೋಹಿತ್ ಎಸ್ ಬೈಕಾಡಿ ಮಾಡಿದ್ದಾರೆ. ಪ್ರತಿ ನಾಟಕಕ್ಕೂ ರೂ. 30 ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...