Monday, February 2, 2026
Monday, February 2, 2026

Women and Child Development Department ಜನವರಿ 21. ಜಿಲ್ಲೆಯ ವಿವಿಧೆಡೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

Date:

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. ಹೊಸನಗರ ಸಂಯುಕ್ತ ಆಸ್ಪತ್ರೆ, ನಗರ, ದೂ.ಸಂ: 9731922693, ಜ.22 ರಂದು ತೀರ್ಥಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಗಾರು, ದೂ.ಸಂ 9480767638. ಜ.24 ರಂದು ಭದ್ರಾವತಿಯ ಸಮುದಾಯ ಆರೋಗ್ಯ ಕೇಂದ್ರ ಹೊಳೆಹೊನ್ನೂರು, ದೂ.ಸಂ: 7899137243. ಜ.28 ರಂದು ಶಿವಮೊಗ್ಗದ ಸಮುದಾಯ ಆರೋಗ್ಯ ಕೇಂದ್ರ ಆಯನೂರು, ದೂ.ಸಂ: 9980150110. ಸೊರಬದಲ್ಲಿ ಸಾರ್ವಜನಿಕ ಆಸ್ಪತ್ರೆ ಸೊರಬ, ದೂ.ಸಂ: 9110493122. ಜ.31 ರಂದು ಶಿಕಾರಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಗೊಪ್ಪ, ದೂ.ಸಂ: 9741161346 ಇಲ್ಲಿ ಶಿಬಿರ ನಡೆಸಲಾಗುತ್ತದೆ.

60 ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಹಾಜರಾಗಲು ವಯಸ್ಸಿನ ಸಂಬಂಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ ಅಂದರೆ ಇಲಾಖೆಯಿಂದ ವಿತರಿಸಲಾದ ಹಿರಿಯ ನಾಗರಿಕ ಗುರುತಿನ ಚೀಟಿ, ಪಾನ್‌ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ ಹಾಗೂ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರತಕ್ಕದ್ದು.

Women and Child Development Department ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಸಲಹೆ ಮತ್ತು ಮಾಹಿತಿ ಕೇಂದ್ರ ದೂ.ಸಂ; 08182251676, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂ:08182222382, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರ ದೂ.ಸಂ:08182221188, ಅಂಗವಿಕಲರ ಪುನರ್ವಸತಿ ಕೇಂದ್ರ ದೂ.ಸಂ:08182488438, ಮೊ;8088620178 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...