Monday, February 2, 2026
Monday, February 2, 2026

Karnataka Sangh Bhavan ಅಜೇಯ ಬಳಗದಿಂದ ವಿನೂತನ ಕಾರ್ಯಕ್ರಮ.”ಅಮ್ಮ ಎಂಬ ಅಚ್ಚರಿಗೆ ಅಕ್ಕರೆಯ ನಮನ

Date:

Karnataka Sangh Bhavan ಶಿವಮೊಗ್ಗ ನಗರದ ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಜ. 19ರ ನಾಳೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕರ್ನಾಟಕ ಸಂಘ ಭವನದಲ್ಲಿ ವಿಶಿಷ್ಟ ಕಾರ್ಯಕ್ರಮ ಒಂದನ್ನು ಹಮ್ಮಿಕೊಳ್ಳಲಾಗಿದೆ.

“ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ” ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ತಾಯಿಯ ಕುರಿತಾದ ಹಲವು ರೀತಿಯ ಅಭಿವ್ಯಕ್ತಿಗಳು ವಿವಿಧ ಗಣ್ಯರಿಂದ ಅನಾವರಣಗೊಳ್ಳಲಿವೆ.

ವೀಣಾ ಬನ್ನಂಜೆ, ಜಗದೀಶ ಶರ್ಮ ಸಂಪ, ವಸುಧೇಂದ್ರ, ಜಿ.ಎಸ್. ನಟೇಶ್, ಸಹನಾ ಚೇತನ್, ವಿಘ್ನೇಶ್ ಭಟ್ ಮೊದಲಾಗಿ ಅನೇಕ ವಿದ್ವಾಂಸರು ಅಮ್ಮನ ಕುರಿತಾದ ತಮ್ಮ ಚಿಂತನೆಗಳನ್ನು ವಿವಿಧ ಆಯಾಮಗಳಲ್ಲಿ ಪ್ರಸ್ತುತ ಪಡಿಸಲಿದ್ದಾರೆ.

Karnataka Sangh Bhavan ಇಡೀ ದಿನ, ಊಟ ತಿಂಡಿ ಪಾನೀಯ ಆದಿಯಾಗಿ ಎಲ್ಲವನ್ನೂ ಒಳಗೊಂಡು ನಡೆಯುವ ಈ ಕಾರ್ಯಕ್ರಮದಲ್ಲಿ ಕಿರು ಉಪನ್ಯಾಸ, ಕಥಾ ವಾಚನ, ಕಿರುಚಿತ್ರ, ಗಮಕ, ಸಂಗೀತ, ನೃತ್ಯ ಮೊದಲಾಗಿ ಹಲವು ಪ್ರಕಾರಗಳ ಮೂಲಕ ಅಮ್ಮನನ್ನು ಕಾಣಿಸುವ ವಿಶೇಷ ಪ್ರಯತ್ನ ಮಾಡಲಾಗಿದೆ.

ಕೇವಲ ಕೆಲವೇ ಜನರು ಪಾಲ್ಗೊಳ್ಳಲು ಅವಕಾಶವಿರುವ ಈ ಕಾರ್ಯಕ್ರಮಕ್ಕೆ ಆಗಮಿಸಲು ಬಯಸುವವರು ಫೋನ್ ನಂಬರ್ 98441 53534 ಅಥವಾ 83108 76277 ಇವುಗಳನ್ನು ಸಂಪರ್ಕಿಸಿ ಕೂಡಲೇ ಹೆಸರು ನೊಂದಾಯಿಸಬೇಕಾಗಿ ಬಳಗ ವಿನಂತಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...