Saturday, December 6, 2025
Saturday, December 6, 2025

Friends Centre ಸಾಹಿತ್ಯ ಕೃತಿಗಳ ಬಗ್ಗೆ ವಿಶ್ಲೇಷಣೆಗೆ ಸಾಹಿತ್ಯ ಹುಣ್ಣಿಮೆ ಪ್ರೇರಣೆ- ಎಚ್.ಎಸ್.ಸುಂದರೇಶ್

Date:

Friends Centre ಸಮಾಜದಲ್ಲಿನ ವಾಸ್ತವತೆಯನ್ನು ಕವಿತೆ, ಹನಿಗವನ, ಕಥೆಗಳ ಮೂಲಕ ವಿಶ್ಲೇಷಿಸಿ ಪರಸ್ಪರ ಚರ್ಚಿಸುವಂತಹ ಕಾರ್ಯಕ್ಕೆ ಸಾಹಿತ್ಯ ಹುಣ್ಣಿಮೆ ಪ್ರೇರಣೆಯಾಗಿದೆ ಎಂದು ಸೂಡಾ ಅಧ್ಯಕ್ಷರಾದ ಎಚ್.ಎಸ್.ಸುಂದರೇಶ್ ಹೇಳಿದರು.

ನಗರದ ಗೋಪಾಳ ಫ್ರೇಂಡ್ಸ್‌ ಸೆಂಟರ್‌ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಫ್ರೇಂಡ್ಸ್‌ ಸೆಂಟರ್‌ ಸಹಯೋಗದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ 233 ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಸಾಹಿತ್ಯ ಹುಣ್ಣಿಮೆ ಮೂಲಕ ಸಾಹಿತ್ಯವನ್ನು ಪಸರಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಸಾಹಿತ್ಯ ಸಮ್ಮೇಳನದಲ್ಲಿ ಚರ್ಚಿಸುತ್ತಿರುವ ವಿಚಾರಗಳು ಸರ್ಕಾರದ ಆಡಳಿತವನ್ನು ಸದಾ ಎಚ್ಚರಿಸುತ್ತಿದ್ದು, ಸಮಾಜಕ್ಕೆ ಪೂರಕ ಶಕ್ತಿಯಾಗಿ ನಿಲ್ಲಲಿದೆ. ಮಲೆನಾಡಿನ ಸಾಹಿತಿಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ. ವಿದೇಶದಲ್ಲಿರುವ ಕನ್ನಡಿಗರು ರಾಜ್ಯೋತ್ಸವ ಕಾರ್ಯಕ್ರಮಗಳನ್ನು ತಮ್ಮ ದೇಶಗಳಲ್ಲಿ ಆಯೋಜಿಸುವ ಮೂಲಕ ನಾಡಿನ ಸಾಂಸ್ಕೃತಿಕ ವೈವಿಧ್ಯತೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿ, ಆಧುನಿಕತೆಯ ಧಾವಂತದಲ್ಲಿರುವ ಸಮಾಜವನ್ನು ಸಾಹಿತ್ಯ ಹೊರತರಲಿ. ಸಾಹಿತ್ಯದ ಮೂಲಕ ಜೀವಪರವಾದ ಚರ್ಚೆಗಳನ್ನು ತಂತ್ರಜ್ಞಾನದಷ್ಟೆ ಪ್ರಭಾವಯುತವಾಗಿ‌ ಮಾಡಬೇಕಾದ ಸಂದರ್ಭ ಇದಾಗಿದೆ. ಮೊಬೈಲ್‌ಗಳ ಅತಿಯಾದ ಬಳಕೆ, ಹೊಸತಲೆಮಾರಿಗೆ ದೊಡ್ಡ ಶಾಪವಾಗಿ ಪರಿಣಮಿಸಿದೆ. ಇದರಿಂದ ಹೊರತರಲು, ಮಕ್ಕಳ ಸಾಹಿತ್ಯ ಸಮ್ಮೇಳಗಳನ್ನು ಆಯೋಜಿಸಲಾಗುತ್ತಿದೆ. ಇಂದಿನ ಮಕ್ಕಳಲ್ಲಿ ಇಂಗ್ಲೀಷ್ ಮತ್ತು ಕನ್ನಡ ಭಾಷೆ ಎರಡರಲ್ಲಿಯೂ ಪರಿಪೂರ್ಣವಾಗಿ ಕಲಿಯಲು ಸಾಧ್ಯವಾಗಿಲ್ಲ. ಧಾವಂತದ ಜೀವನದಲ್ಲಿ ಪೋಷಕರು ಪ್ರತಿಷ್ಟಿತ ಶಾಲೆಗಳ ಮೇಲೆ ತೋರುವಷ್ಟು ಆಸಕ್ತಿಯನ್ನು ತಮ್ಮ ಮಕ್ಕಳಿಗೆ ಸ್ವತಃ ಭಾಷೆಯನ್ನು ಕಲಿಸಲು ತೋರುತ್ತಿಲ್ಲ.

Friends Centre ಪ್ರಾಥಮಿಕ ಹಂತದಲ್ಲಿ ಮಾತೃಭಾಷೆ ಪರಿಪೂರ್ಣವಾಗಿ ಕಲಿಯದೆ ಇದ್ದಲ್ಲಿ, ಇತರೆ ಭಾಷೆಗಳ ಕಲಿಕೆಯಾದರು ಹೇಗೆ ಸಾಧ್ಯ. ಕಲಿಕೆಯ ಗುಣಮಟ್ಟ ಸುಧಾರಣೆ ಮಾಡುವುದು ಹೇಗೆ ಎಂಬುದರ ಚರ್ಚೆಯ ಜೊತೆಗೆ ಸೃಜನಾತ್ಮಕ ಚಿಂತನೆಗಳನ್ನು ಬೆಳೆಸುವತ್ತ ಯೋಚಿಸಬೇಕಿದೆ. ಕಾಲಕಾಲಕ್ಕೆ ನಡೆಯುವ ಚುನಾವಣೆಗಳು ಉದ್ಯಮಗಳಾಗಿವೆ. ಉದ್ಯಮವಾದ ಚುನಾವಣೆಗಳಿಂದ ರೂಪಗೊಂಡ ಸರ್ಕಾರದಿಂದ ಜನ ಸಾಮಾನ್ಯರು ಏನು ತಾನೆ ನಿರೀಕ್ಷಿಸಲು ಸಾಧ್ಯ. ಜನಪದ ಕಲಾವಿದರು ನಮ್ಮ ಸಂಸ್ಕೃತಿಯ ತಾಯಿಬೇರುಗಳು. ಅವರಿಗೆ ಬೆಂಬಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಕಲಾವಿದರನ್ನು ಎಂದಿಗೂ ಅವಮಾನಿಸದಿರಿ ಎಂದು ಹೇಳಿದರು.

ಫ್ರೆಂಡ್ಸ್ ಸೆಂಟರ್ ಅಧ್ಯಕ್ಷರಾದ ಬಿ. ಜಿ. ಧನರಾಜ್ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಸೆಂಟರ್ ಮಹಿಳಾ ಘಟಕದ ಅಧ್ಯಕ್ಷೆ ಸ್ವಪ್ನ ಬದರಿನಾಥ, ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್‌, ವೇದಿಕೆ ಪದಾಧಿಕಾರಿಗಳಾದ ಮಧುಸೂದನ್ ಐತಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದರಾದ ಭದ್ರಾವತಿ ಲಕ್ಷ್ಮಣ್ ರಾವ್ ಮತ್ತು ತಂಡದವರು ಚೌಡಿಕೆ ಪದ ಹಾಡಿದರು. ಎನ್.ಇ.ಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಕಥೆ ಹೇಳಿದರು. ಕವಿಗಳಾದ ಊರ್ಮಿಳಾ ರಾವ್, ಲತಾ ನಾಗರಾಜ್ ಕವನ ವಾಚಿಸಿ, ಡಿ. ಗಣೇಶ್, ಕೆ. ಎಸ್. ಮಂಜಪ್ಪ ಹನಿಗವನ ವಾಚಿಸಿದರು. ಫ್ರೆಂಡ್ಸ್‌ ಸೆಂಟರ್ ಪದಾಧಿಕಾರಿ ರವೀಂದ್ರ ಐತಾಳ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...